ADVERTISEMENT

ಬೆಳೆ ಚೆಲ್ಲಿ ಧರಣಿ; ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 2 ಡಿಸೆಂಬರ್ 2018, 17:41 IST
Last Updated 2 ಡಿಸೆಂಬರ್ 2018, 17:41 IST
ಸಕಲೇಶಪುರ ತಾಲ್ಲೂಕಿನ ಬಾಳ್ಳುಪೇಟೆಯಲ್ಲಿ ನಾಲ್ಕು ದಿನಗಳಿಂದ ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆ ಭಾನುವಾರ ತೀವ್ರ ಸ್ವರೂಪ ಪಡೆದುಕೊಂಡಿದ್ದು ಪ್ರತಿಭಟನಾಕಾರರು, ಕಾಡಾನೆ ಹಾನಿ ಮಾಡಿರುವ ಬೆಳೆಯನ್ನು ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಚೆಲ್ಲಾಡಿ ಪ್ರತಿಭಟನೆ ನಡೆಸಿದರು
ಸಕಲೇಶಪುರ ತಾಲ್ಲೂಕಿನ ಬಾಳ್ಳುಪೇಟೆಯಲ್ಲಿ ನಾಲ್ಕು ದಿನಗಳಿಂದ ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆ ಭಾನುವಾರ ತೀವ್ರ ಸ್ವರೂಪ ಪಡೆದುಕೊಂಡಿದ್ದು ಪ್ರತಿಭಟನಾಕಾರರು, ಕಾಡಾನೆ ಹಾನಿ ಮಾಡಿರುವ ಬೆಳೆಯನ್ನು ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಚೆಲ್ಲಾಡಿ ಪ್ರತಿಭಟನೆ ನಡೆಸಿದರು   

ಸಕಲೇಶಪುರ: ಆಲೂರು ಹಾಗೂ ಸಕಲೇಶಪುರ ತಾಲ್ಲೂಕುಗಳಲ್ಲಿ ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕೆಂದು 4 ದಿನಗಳಿಂದ ಬಾಳ್ಳುಪೇಟೆಯಲ್ಲಿ ನಡೆಸುತ್ತಿರುವ ಪ್ರತಿಭಟನೆ ಭಾನುವಾರ ತೀವ್ರ ಸ್ವರೂಪ ಪಡೆದುಕೊಂಡಿತು.

ಪ್ರತಿಭಟನಾಕಾರರು ಅಂಗಡಿಗಳನ್ನು ಬಂದ್‌ ಮಾಡಿ, ನಾಶವಾದ ಬೆಳೆಯನ್ನು ಹೆದ್ದಾರಿಗೆ ಚೆಲ್ಲಿ ರಸ್ತೆ ತಡೆ ನಡೆಸಿದರು.

ಧರಣಿ ಕುಳಿತ ಶಾಸಕ: ರೈತರು, ಬೆಳೆಗಾರರ ಸಂಘಟನೆಗಳು, ಕರ್ನಾಟಕ ರಕ್ಷಣಾ ವೇದಿಕೆ ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲವಾಗಿ ಶಾಸಕ ಎಚ್‍.ಕೆ.ಕುಮಾರಸ್ವಾಮಿ, ಕಾಂಗ್ರೆಸ್‍ ಮುಖಂಡ ಬಿ.ಶಿವರಾಂ, ನಿವೃತ್ತ ಅಧಿಕಾರಿ ಸಿದ್ದಯ್ಯ ಸೇರಿ ಹಲವರು ಧರಣಿ ಕುಳಿತರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.