ಬೆಂಗಳೂರು: ಮೌರ್ಯ ವೃತ್ತದ ಬಳಿ ಪ್ರತಿಭಟನೆ ಮುಗಿಸಿ ತೆರಳುತ್ತಿದ್ದ ಡಿ.ಕೆ. ಶಿವಕುಮಾರ್ ಬೆಂಬಲಿಗರು ಕೆಎಸ್ಆರ್ಟಿಸಿ ಬಸ್ಸಿಗೆ ಕಲ್ಲು ತೂರಾಟ ನಡೆಸಿದ ಘಟನೆ ನಡೆದಿದೆ.
ಇದನ್ನೂ ಓದಿ: ಡಿಕೆಶಿ ಬಂಧನ Live ಅಪ್ಡೇಟ್ಸ್
ಹಳೆ ಜೆಡಿಎಸ್ ಕಚೇರಿ ಮುಂಭಾಗದಲ್ಲಿ ಬೆಂಗಳೂರು- ಗೌರಿಬಿದನೂರು ಬಸ್ಗೆ ಪ್ರತಿಭಟನಾನಿರತರು ಕಲ್ಲು ತೂರಿ, ಗಾಜು ಜಖಂಗೊಳಿಸಿದರು.ಬಸ್ ಬೆಂಗಳೂರಿನಿಂದ ಗೌರಿಬಿದನೂರು ಕಡೆ ತೆರಳುತ್ತಿತ್ತು.
ಡಿ.ಕೆ. ಶಿವಕುಮಾರ್ ನಿವಾಸಕ್ಕೆ ಭೇಟಿ: ಕಾಂಗ್ರೆಸ್ ಮುಖಂಡರಾದ ರಮೇಶ್ ಕುಮಾರ್ ಮತ್ತು ಚೆಲುವರಾಯಸ್ವಾಮಿ ಅವರು ಶಾಸಕ ಡಿ.ಕೆ. ಶಿವಕುಮಾರ್ ಅವರ ಸದಾಶಿವನಗರದ ನಿವಾಸಕ್ಕೆ ಬುಧವಾರ ಭೇಟಿ ನೀಡಿದರು.
'ಶಿವಕುಮಾರ್ ಅವರಿಗೆ ಏನೂ ಆಗುವುದಿಲ್ಲ. ಎರಡು ಮೂರುದಿನಗಳಲ್ಲಿ ಅವರು ಮನೆಗೆ ವಾಪಸ್ ಆಗಲಿದ್ದಾರೆ' ಎಂದು ಇಬ್ಬರು ನಾಯಕರೂ ಶಿವಕುಮಾರ್ ಅವರ ಪತ್ನಿ, ಮಕ್ಕಳಿಗೆ ಧೈರ್ಯ ತುಂಬಿದರು
ಬಳಿಕ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದ ರಮೇಶ್ ಕುಮಾರ್ ಮತ್ತು ಚೆಲುವರಾಯಸ್ವಾಮಿ, 'ಇದು ಖಾಸಗಿ ಭೇಟಿ’ಎಂದಷ್ಟೇಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.