ADVERTISEMENT

ಭಿಕ್ಷೆ ‌ಬೇಡಿ ರೈತರಿಂದ ಪ್ರತಿಭಟನೆ: ₹ 5,470 ಸರ್ಕಾರಕ್ಕೆ ಜಮಾ

​ಪ್ರಜಾವಾಣಿ ವಾರ್ತೆ
Published 24 ಅಕ್ಟೋಬರ್ 2020, 1:41 IST
Last Updated 24 ಅಕ್ಟೋಬರ್ 2020, 1:41 IST
ರಾಯಚೂರಿನಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯ ಪದಾಧಿಕಾರಿಗಳು‌ ಭಿಕ್ಷೆ ‌ಬೇಡುವ ಮೂಲಕ ಸರ್ಕಾರದ ವಿರುದ್ಧ ಶುಕ್ರವಾರ ವಿನೂತನವಾಗಿ ಪ್ರತಿಭಟನೆ ನಡೆಸಿದರು
ರಾಯಚೂರಿನಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯ ಪದಾಧಿಕಾರಿಗಳು‌ ಭಿಕ್ಷೆ ‌ಬೇಡುವ ಮೂಲಕ ಸರ್ಕಾರದ ವಿರುದ್ಧ ಶುಕ್ರವಾರ ವಿನೂತನವಾಗಿ ಪ್ರತಿಭಟನೆ ನಡೆಸಿದರು   

ರಾಯಚೂರು: ಬೆಳೆ ವಿಮೆ ಪಾವತಿ ವಿಳಂಬ ಹಾಗೂ ಮಳೆಯಿಂದ ಆದ ಹಾನಿಗೆ ರಾಜ್ಯ ಸರ್ಕಾರ ಈವರೆಗೂ ಪರಿಹಾರ ನೀಡಿಲ್ಲ ಎಂದು ಆರೋಪಿಸಿಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯ ಪದಾಧಿಕಾರಿಗಳು‌ ಶುಕ್ರವಾರ ನಗರದ ಸಾರ್ವಜನಿಕ ಪ್ರದೇಶಗಳಲ್ಲಿ ಜನರಿಂದ ಭಿಕ್ಷೆ ‌ಬೇಡಿದರು.

ಹೀಗೆ ಸಂಗ್ರಹವಾದ ₹ 5,470 ಅನ್ನು ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ನೀಡಿ, ವಿನೂತನ ಪ್ರತಿಭಟನೆ ನಡೆಸಿದರು.

ರೈತ ಸಂಘದ ರಾಜ್ಯ ಘಟಕದ ಗೌರವಾಧ್ಯಕ್ಷ ಚಾಮರಸ ಮಾಲಿ‌ಪಾಟೀಲ ಮಾತನಾಡಿ, ‘ಮೂರು ವರ್ಷಗಳಿಂದ ರೈತರು ಬರದಿಂದ ಹಾಗೂ
ಈ ವರ್ಷ ಅತಿವೃಷ್ಟಿಯಿಂದ ಸಮಸ್ಯೆಯಲ್ಲಿದ್ದಾರೆ.ಬೆಳೆ‌ ಹಾನಿಗೆ ಈವರೆಗೂ ಪರಿಹಾರ ನೀಡಿಲ್ಲ.ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ದಿವಾಳಿಯಾಗಿವೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮುಖಂಡರಾದ ಅಮರಣ್ಣ ಗುಡಿಹಾಳ, ಜಿಲ್ಲಾಧ್ಯಕ್ಷ ಸುಗೂರಯ್ಯ ಸ್ವಾಮಿ‌ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.