ತುಮಕೂರು: ಇಲ್ಲಿನ ಜಯನಗರ ಠಾಣೆ ಸಬ್ಇನ್ಸ್ಪೆಕ್ಟರ್ ನವೀನ್ ಅವರ ಮೇಲೆ ಕಾರು ಹರಿಸಿ ಕೊಲೆಗೆ ಯತ್ನಿಸಿದ ಆರೋಪದ ಮೇಲೆ ಬೆಂಗಳೂರಿನ ಹೊಸಗುಡ್ಡದಹಳ್ಳಿಯ ದಿಲೀಪ್ ಕುಮಾರ್ (27), ಕಲಾಸಿಪಾಳ್ಯದ ಸಂತೋಷ್ (23), ಕೆ.ಆರ್.ಮಾರುಕಟ್ಟೆಯ ವಿತ್ತೇಶ್ (21), ಮುರುಗನ್ (24) ಎಂಬುವವರನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ಉಪ್ಪಾರಹಳ್ಳಿ ಕೆಳ ಸೇತುವೆ ಬಳಿಸೋಮವಾರ ನಡುರಾತ್ರಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಇನೋವಾ ಕ್ರಿಸ್ಟಾ ವಾಹನವನ್ನು ನವೀನ್ ತಡೆದು ವಿಚಾರಣೆ ನಡೆಸುತ್ತಿದ್ದರು. ಈ ವೇಳೆ ಚಾಲಕ, ನವೀನ್ ಅವರನ್ನು ಕೆಳಗೆ ತಳ್ಳಿ ಅವರ ಮೇಲೆ ವಾಹನ ಹರಿಸಲು ಯತ್ನಿಸಿದ್ದ. ಕಾರಿನಲ್ಲಿದ್ದ ಎಲ್ಲರೂ ಪರಾರಿಯಾಗಿದ್ದರು.
‘ಕೌಟುಂಬಿಕ ವೈಷಮ್ಯದ ಕಾರಣಕ್ಕೆ ವೇಣುಗೋಪಾಲ್ ಎಂಬುವವರನ್ನು ಅಪಹರಿಸಲು ತುಮಕೂರಿಗೆ ಬಂದಿದ್ದೆವು’ ಎಂದು ವಿಚಾರಣೆ ವೇಳೆ ಆರೋಪಿಗಳು ತಿಳಿಸಿದ್ದಾರೆ’ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ ಮಾಹಿತಿ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.