ಕಲಬುರಗಿ: ಪಿಎಸ್ಐ ನೇಮಕಾತಿ ಹಗರಣ ಸಂಬಂಧ ಸರ್ಕಾರ ಬೇರು ಮಟ್ಟದ ತನಿಖೆ ನಡೆಸುತ್ತಿದ್ದು, ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ನವರು ಸರಕಾರದ ಕೆಲ ಸಚಿವರ ತೇಜೋವಧೆ ಮಾಡುತ್ತಿದ್ದಾರೆ. ತನಿಖೆ ಪಾರದರ್ಶಕವಾಗಿ ನಡೆಯುತ್ತಿದ್ದು, ಹಗರಣ ಮಾಡುವವರು ಭವಿಷ್ಯದಲ್ಲಿ ಮುಟ್ಟಿ ನೋಡಿಕೊಳ್ಳುವಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.