ADVERTISEMENT

ಪಿಎಸ್ಐ ನೇಮಕಾತಿ ಅಕ್ರಮ: ಉಪ್ಪು ತಿಂದವರು ನೀರಿ ಕುಡಿಯುತ್ತಾರೆ –ಎಸ್.ಟಿ ಸೋಮಶೇಖರ್

​ಪ್ರಜಾವಾಣಿ ವಾರ್ತೆ
Published 5 ಮೇ 2022, 11:20 IST
Last Updated 5 ಮೇ 2022, 11:20 IST
ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ್
ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ್   

ಬೆಂಗಳೂರು: ‘ನಿರುದ್ಯೋಗಿಗಳ ಭವಿಷ್ಯದ ವಿಚಾರದಲ್ಲಿ ಚೆಲ್ಲಾಟ ಆಡಬಾರದು ಎಂಬ ಉದ್ದೇಶ ನಮ್ಮದು. ಹೀಗಾಗಿ, ಪಿಎಸ್‍ಐ ನೇಮಕಾತಿಯಲ್ಲಿ ಅಕ್ರಮದ ಆರೋಪ ಕೇಳಿ ಬಂದ ತಕ್ಷಣ ತನಿಖೆಗೆ ಆದೇಶಿಸಲಾಗಿದೆ.ಮುಖ್ಯಮಂತ್ರಿ ಸಮರ್ಥರಿದ್ದು, ಉಪ್ಪು ತಿಂದವರು ನೀರು ಕುಡಿಯಲಿದ್ದಾರೆ’ ಎಂದು ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ್ ಹೇಳಿದರು.

ಸುದ್ದಿಗಾರರ ಜತೆ ಗುರುವಾರ ಮಾತನಾಡಿದ ಅವರು, ‘ನೇಮಕಾತಿ ಪ್ರಕರಣದ ಬಗ್ಗೆ ಅಂತೆ ಕಂತೆಗಳಿಗೆಲ್ಲ ಉತ್ತರ ಕೊಡುವುದಿಲ್ಲ. ಆರೋಪ ಮಾಡುವವರು ಮಾಹಿತಿ ಕೊಟ್ಟರೆ ತನಿಖೆ ಸಮ‌ರ್ಪಕವಾಗಿ ನಡೆಯಲು ಸಹಕಾರಿಯಾಗಲಿದೆ’ ಎಂದರು.

ರಾಮನಗರ ಜಿಲ್ಲೆ ಒಕ್ಕಲಿಗರ ಜಿಲ್ಲೆ ಎಂಬ ಕಾರಣಕ್ಕೆ ನಾಯಕತ್ವಕ್ಕಾಗಿ ಪೈಪೋಟಿ ನಡೆಯುತ್ತಿದೆ. 4 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವಿಗೆ ಶ್ರಮಿಸುತ್ತಿರುವ ಕಾರಣದಿಂದ ಸಚಿವ ಡಾ.ಅಶ್ವತ್ಥನಾರಾಯಣ್ ವಿರುದ್ಧ ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಆಧಾರರಹಿತ ಆರೋಪ ಮಾಡುತ್ತಿದ್ದಾರೆ ಎಂದರು.

ADVERTISEMENT

‘ಪಿಎಸ್‌ಐ ನೇಮಕಾತಿ ವಿಷಯದಲ್ಲಿ ಪ್ರಾಮಾಣಿಕ ತನಿಖೆ ನಡೆಯಬೇಕಿದೆ. ಅಪರಾಧಿಗಳಿಗೆ ಶಿಕ್ಷೆ ಆಗಲೇಬೇಕು’ ಎಂದ ಸೋಮಶೇಖರ್‌, ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆಗೆ ನೋಟಿಸ್ ಕೊಡಬಾರದು ಎಂದಿದೆಯೇ? ದಾಖಲಾತಿ ಕೊಡಿ ಎಂದು ಕೇಳಿದ್ದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು.

ಕಾಂಗ್ರೆಸ್‌ನವರು ನಾಲ್ಕು ವರ್ಷ ಮಲಗಿದ್ದರು. ಜೀವಂತ ಇದ್ದೇವೆ ಎಂದು ತೋರಿಸಲು ಈಗ ನಿರಾಧಾರ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ದೂರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.