ADVERTISEMENT

ಬಿಳಿಹಾಳೆ ಮೇಲೆ ಸಹಿ ಪಡೆದ ಸಿಐಡಿ ಅಧಿಕಾರಿಗಳು: ಪಿಎಸ್‌ಐ ಪ್ರಕರಣದ ಬಂಧಿತರ ದೂರು

​ಪ್ರಜಾವಾಣಿ ವಾರ್ತೆ
Published 10 ಮೇ 2022, 3:12 IST
Last Updated 10 ಮೇ 2022, 3:12 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ    

ಬೆಂಗಳೂರು: ಸಿಐಡಿ ಅಧಿಕಾರಿಗಳ ವರ್ತನೆ ಬಗ್ಗೆ ನ್ಯಾಯಾಲಯದಲ್ಲಿ ಅಸಮಾಧಾನ ವ್ಯಕ್ತಪಡಿಸಿದ ಬಂಧಿತ ಅಭ್ಯರ್ಥಿಗಳು, ‘ವಿಚಾರಣೆ ನೆಪದಲ್ಲಿ ಸಾಕಷ್ಟು ತೊಂದರೆ ನೀಡಿದ್ದಾರೆ’ ಎಂದು ದೂರಿದರು.

‘ಸಂಬಂಧವಿಲ್ಲದ ಪ್ರಶ್ನೆಗಳನ್ನು ಕೇಳಿದ್ದಾರೆ. ಬಿಳಿ ಹಾಳೆ ಮೇಲೆ ಸಹಿ ಮಾಡಿಸಿಕೊಂಡಿದ್ದಾರೆ’ ಎಂದೂ ಆರೋಪಿಸಿದರು. ಅಭ್ಯರ್ಥಿಗಳ ದೂರು ಆಲಿಸಿದ ನ್ಯಾಯಾಧೀಶರು, ಸಿಐಡಿ ಅಧಿಕಾರಿಗಳನ್ನು ವಿಚಾರಿಸಿ ಮಾಹಿತಿ ಪಡೆದುಕೊಂಡರು. ನಂತರವೇ ಅಭ್ಯರ್ಥಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT