ಬೆಂಗಳೂರು: ಶನಿವಾರ ನಡೆದ ದ್ವಿತೀಯ ಪಿಯು ರಾಜ್ಯಶಾಸ್ತ್ರ ಪತ್ರಿಕೆಯ ಪರೀಕ್ಷೆ ವೇಳೆ ನಕಲು ಮಾಡುವಾಗ 3 ವಿದ್ಯಾರ್ಥಿಗಳು ಸಿಕ್ಕಿಬಿದ್ದು, ಡಿಬಾರ್ ಆಗಿದ್ದಾರೆ.
ಬಳ್ಳಾರಿ, ಚಿತ್ರದುರ್ಗ, ತುಮಕೂರಿನ ತಲಾ ಒಬ್ಬ ವಿದ್ಯಾರ್ಥಿಗಳು ಪಿ.ಯು. ಮಂಡಳಿಯ ಶಿಸ್ತುಕ್ರಮಕ್ಕೆ ಗುರಿಯಾಗಿದ್ದಾರೆ.
ರಾಜ್ಯಶಾಸ್ತ್ರದ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ 1,84,643 ಅಭ್ಯರ್ಥಿಗಳಲ್ಲಿ 13,444ಅಭ್ಯರ್ಥಿಗಳು ಗೈರು ಹಾಜರಾಗಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.