ADVERTISEMENT

2018ರಲ್ಲಿ ಗೋಕಾಕ ಬಿಜೆಪಿ ಅಭ್ಯರ್ಥಿಯಾಗಿದ್ದ ಪೂಜಾರಿ ಜೆಡಿಎಸ್‌ನಿಂದ ಕಣಕ್ಕೆ?

​ಪ್ರಜಾವಾಣಿ ವಾರ್ತೆ
Published 17 ನವೆಂಬರ್ 2019, 16:30 IST
Last Updated 17 ನವೆಂಬರ್ 2019, 16:30 IST
   

ಬೆಳಗಾವಿ: ಗೋಕಾಕ ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ವಂಚಿತರಾಗಿರುವ ಮತ್ತು ಕಾಂಗ್ರೆಸ್‌ ಟಿಕೆಟ್‌ಗೂ ಪ್ರಯತ್ನಿಸಿದ್ದ ಅಶೋಕ ಪೂಜಾರಿ, ಕೊನೆ ಕ್ಷಣದಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸುತ್ತಾರೆ ಎನ್ನಲಾಗುತ್ತಿದೆ. ಆದರೆ, ಇದನ್ನು ಪೂಜಾರಿ ಖಚಿತಪಡಿಸಿಲ್ಲ.

ಸೋಮವಾರ (ನ. 18ರಂದು) ಜೆಡಿಎಸ್‌ ಮುಖಂಡ ಎಚ್‌.ಡಿ. ಕುಮಾರಸ್ವಾಮಿ ಬಂದು ನಾಮಪತ್ರ ಹಾಕಿಸುತ್ತಾರೆ ಎಂದೂ ಹೇಳಲಾಗುತ್ತಿದೆ. ಇದನ್ನು ಜೆಡಿಎಸ್‌ನ ಕೆಲವು ಕಾರ್ಯಕರ್ತರು ಸಾಮಾಜಿಕ ಮಾಧ್ಯಮದಲ್ಲೂ ಹಾಕಿಕೊಂಡಿದ್ದಾರೆ.

‘ಇನ್ನೂ ಏನನ್ನೂ ನಿರ್ಧಾರ ಮಾಡಿಲ್ಲ’ ಎಂದು ಪೂಜಾರಿ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.

ADVERTISEMENT

2008ರ ಚುನಾವಣೆಯಲ್ಲಿ ಅವರು ಜೆಡಿಎಸ್‌ ಅಭ್ಯರ್ಥಿಯಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.