ADVERTISEMENT

ಉಗ್ರನ ಹತ್ಯೆ ಸಮಾಧಾನ ತಂದಿದೆ: ಗುರು ಪತ್ನಿ ಕಲಾವತಿ

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2019, 20:08 IST
Last Updated 18 ಫೆಬ್ರುವರಿ 2019, 20:08 IST
ಯೋಧ ಎಚ್.ಗುರು ಮೃತದೇಹಕ್ಕೆ ನಮನ ಸಲ್ಲಿಸಿದ ಪತ್ನಿ ಕಲಾವತಿ
ಯೋಧ ಎಚ್.ಗುರು ಮೃತದೇಹಕ್ಕೆ ನಮನ ಸಲ್ಲಿಸಿದ ಪತ್ನಿ ಕಲಾವತಿ   

ಮಂಡ್ಯ: ಪುಲ್ವಾಮಾದಲ್ಲಿ ಸಿಆರ್‌ಪಿಎಫ್‌ ಯೋಧರ ಮೇಲಿನ ದಾಳಿ ರೂವಾರಿ ಎನ್ನಲಾದ ಉಗ್ರನನ್ನು ಭದ್ರತಾ ಪಡೆಗಳು ಕೊಂದಿರುವುದಕ್ಕೆ ಮದ್ದೂರು ತಾಲ್ಲೂಕು ಗುಡಿಗೆರೆ ಕಾಲೊನಿ ಹುತಾತ್ಮ ಯೋಧ ಎಚ್‌.ಗುರು ಪತ್ನಿ ಕಲಾವತಿ ಸಮಾಧಾನ ವ್ಯಕ್ತಪಡಿಸಿದ್ದಾರೆ.

‘ನಮ್ಮ ದೇಶದಲ್ಲಿ ಉಗ್ರ ಎಂಬ ಪದ ಇತಿಹಾಸ ಸೇರಬೇಕು. ನನ್ನ ಪತಿ ಸೇರಿ ಹಲವು ಯೋಧರನ್ನು ಬಲಿ ಪಡೆದ ಉಗ್ರನನ್ನು ಕೊಂದ ಸೈನಿಕರಿಗೆ ಅಭಿನಂದಿಸುತ್ತೇನೆ’ ಎಂದು ಹೇಳಿದರು.

‘ಉಗ್ರವಾದಿಗಳ ವಿರುದ್ಧ ಹೋರಾಟ ನಡೆಸುತ್ತಿರುವ ಸೈನಿಕರು ಸುರಕ್ಷಿತವಾಗಿರಬೇಕು. ನನ್ನ ಪರಿಸ್ಥಿತಿ ಯಾವ ಮಹಿಳೆಗೂ ಬರಬಾರದು’ ಎಂದರು.

ADVERTISEMENT

ಇವನ್ನೂ ಓದಿ....

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.