ADVERTISEMENT

ಪುಲ್ವಾಮ ದಾಳಿಗೆ ವರ್ಷ| ಯೋಧ ಎಚ್. ಗುರು ಕುಟುಂಬದ ಸ್ಥಿತಿ ಈಗ ಹೇಗಿದೆ ಗೊತ್ತೇ?

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2020, 4:58 IST
Last Updated 14 ಫೆಬ್ರುವರಿ 2020, 4:58 IST
ಪುಲ್ವಾಮ ಉಗ್ರ ದಾಳಿಯಲ್ಲಿ ಮಡಿದ ಯೋಧ ಎಚ್‌.ಗುರು
ಪುಲ್ವಾಮ ಉಗ್ರ ದಾಳಿಯಲ್ಲಿ ಮಡಿದ ಯೋಧ ಎಚ್‌.ಗುರು    

ಮಂಡ್ಯ: ಪುಲ್ವಾಮಾ ದಾಳಿ ನಡೆದು ಶುಕ್ರವಾರಕ್ಕೆ (ಫೆ.14) ಒಂದು ವರ್ಷವಾದ ಹಿನ್ನೆಲೆಯಲ್ಲಿ ದಾಳಿಯಲ್ಲಿ ಹುತಾತ್ಮರಾಗಿದ್ದ ಜಿಲ್ಲೆಯ ಮದ್ದೂರು ತಾಲ್ಲೂಕಿನ ಸಿಆರ್‌ಪಿಎಫ್ ಯೋಧ ಎಚ್.ಗುರು ಅವರನ್ನು ರಾಜ್ಯ ನೆನೆಯುತ್ತಿದೆ. ಆದರೆ, ಈ ಒಂದು ವರ್ಷದಲ್ಲಿ ಯೋಧ ಗುರು ಕುಟುಂಬ ಹಲವು ಬದಲಾವಣೆ ಕಂಡಿದೆ.

ಪುಲ್ವಾಮ ದಾಳಿಯಲ್ಲಿ ಯೋಧ ಗುರು ಹುತಾತ್ಮರಾಗಿದ್ದಾಗ ನೋವಿನಲ್ಲಿದ್ದ ಕುಟುಂಬಸ್ಥರು

ಭಾರತೀನಗರದ ಯುವಕರು ಇಂದು 10 ಗಂಟೆಗೆ ಪೂಜೆ ಇಟ್ಟುಕೊಂಡಿದ್ದಾರೆ. ಮಳವಳ್ಳಿ- ಭಾರತೀನಗರ ರಸ್ತೆಯ ಸರ್ಕಾರಿ ಭೂಮಿಯಲ್ಲಿ ಗುರು ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ನಡೆದಿತ್ತು. ಅಂದು ಮುಖ್ಯಮಂತ್ರಿಯಾಗಿದ್ದ ಎಚ್.ಡಿ.ಕುಮಾರಸ್ವಾಮಿ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದರು.

ADVERTISEMENT
ಎಚ್‌.ಗುರು ನಿವಾಸಕ್ಕೆ ಭೇಟಿ ನೀಡಿದ್ದ ಸುಮಲತಾ

ಎಚ್‌.ಗುರು ಅವರ ತಾಯಿ ಚಿಕ್ಕಹೊಳ್ಳಮ್ಮ, ತಂದೆ ಹೊನ್ನಯ್ಯ ಅವರೊಂದಿಗೆ ಗುರು ಅವರ ಪತ್ನಿ ಕಲಾವತಿ ಯಾವುದೇ ಸಂಪರ್ಕ ಇಟ್ಟುಕೊಂಡಿಲ್ಲ. ತಮ್ಮ ಪೋಷಕರೊಂದಿಗೆ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಗುರು ಪೋಷಕರು ಭಾರತೀನಗರದಲ್ಲಿಲಾಂಡ್ರಿ ವೃತ್ತಿ ಮುಂದುವರೆಸುತ್ತಿದ್ದಾರೆ.

ಯೋಧ ಗುರು ಪಾರ್ಥಿವ ಶರೀರ ರಾಜ್ಯಕ್ಕೆ ತಂದಿದ್ದ ಸನ್ನಿವೇಶ

ಈಡೇರದ ಶಾಸಕರ ಭರವಸೆ: ಅಂತ್ಯಕ್ರಿಯೆ ನಡೆದ ಸ್ಥಳವನ್ನು ವರ್ಷದೊಳಗೆ ಸ್ಮಾರಕವಾಗಿ ಅಭಿವೃದ್ಧಿಗೊಳಿಸುವುದಾಗಿ ಶಾಸಕ ಡಿ.ಸಿ.ತಮ್ಮಣ್ಣ ಭರವಸೆ ನೀಡಿದ್ದರು. ಆದರೆ ಈವರೆಗೂ ಭರವಸೆ ಈಡೇರಿಲ್ಲ. ಅಂತ್ಯಕ್ರಿಯೆ ನಡೆದ ಸ್ಥಳದಲ್ಲಿ ಸ್ವಚ್ಛತೆ ಕೊರತೆ ಎದ್ದು ಕಾಣುತ್ತಿದೆ. ಅಕ್ಕಪಕ್ಕದಲ್ಲಿ ತ್ಯಾಜ್ಯ ಸುರಿಯಲಾಗುತ್ತಿದೆ.

ಬೆಂಗಳೂರಿನಲ್ಲಿ ನಡೆದಿದ್ದ ಮೆರವಣಿಗೆ

ಗುರು ಅವರು ಹುತಾತ್ಮರಾದಾಗ ಇಡೀ ರಾಷ್ಟ್ರವೇ ಮರುಗಿತ್ತು. ಅವರಿಗೆ ನೆರವಿನ ಮಹಾಪೂರವೇ ಹರಿದು ಬಂದಿತ್ತು. 15 ಕೋಟಿಗೂ ಹೆಚ್ಚಿನ ಮೊತ್ತದ ಹಣ ಸಂಗ್ರಹವಾಗಿತ್ತು. ಈ ವಿಚಾರವಾಗಿ ಕುಟುಂಬಸ್ಥರಲ್ಲಿ ಕಲಹ ಏರ್ಪಟ್ಟಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.