ಬೆಂಗಳೂರು:ಬಿಜೆಪಿ ವಿರುದ್ಧ ವಾಗ್ದಾಳಿ ಮಾಡಿ, ಪುಲ್ವಾಮ ಉಗ್ರರ ದಾಳಿ ಕುರಿತು ಮಾತನಾಡಿರುವ ರಾಜ್ಯಸಭಾ ಸದಸ್ಯ ಬಿ.ಕೆ. ಹರಿಪ್ರಸಾದ್, ‘ಪುಲ್ವಾಮ ದಾಳಿ ಸಂಬಂಧ ಮೋದಿ ಹಾಗೂ ಪಾಕಿಸ್ತಾನ ನಡುವೆ ಯಾವುದಾದರೂ ಮ್ಯಾಚ್ ಫಿಕ್ಸಿಂಗ್ ಆಗಿದೆಯಾ?’ ಎಂದು ಹೇಳಿದ್ದಾರೆ.
‘ಪುಲ್ವಾಮ ದಾಳಿಯಲ್ಲಿ ಗುಪ್ತಚರ ಇಲಾಖೆ ವೈಫಲ್ಯ ಎದ್ದು ಕಾಣುತ್ತದೆ. ಬಿಜೆಪಿಯವರು ವಿವಿಧೆಡೆ ಎರಡು ಕೆ.ಜಿ. ಗೋ ಮಾಂಸವನ್ನು ಪತ್ತೆ ಮಾಡುತ್ತಾರೆ. ಆದರೆ, ರಾಷ್ಟ್ರೀಯ ಹೆದ್ದಾರಿಯಲ್ಲಿ 350 ಕೆ.ಜಿ. ಆರ್ಡಿಎಕ್ಸ್ ಪತ್ತೆಹಚ್ಚಲು ಆಗಿಲ್ಲ’ ಎಂದು ಹೇಳಿಕೆ ನೀಡಿ ವಿವಾದಕ್ಕೆ ಕಾರಣವಾಗಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.