ADVERTISEMENT

ಪಠ್ಯಪುಸ್ತಕವಾಗಿ ಪುನೀತ್ ರಾಜ್‌ಕುಮಾರ್ ಬಾಲ್ಯ

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2022, 22:00 IST
Last Updated 22 ಡಿಸೆಂಬರ್ 2022, 22:00 IST
   

ಬೆಂಗಳೂರು: ಪುನೀತ್‌ ರಾಜ್‌ಕುಮಾರ್ ಅವರ ಜೀವನಚರಿತ್ರೆಯ ಒಂದು ಭಾಗವನ್ನು ಬೆಂಗಳೂರು ವಿಶ್ವವಿದ್ಯಾಯದ ಪಠ್ಯದಲ್ಲಿ ಅಳವಡಿಸಲಾಗಿದೆ.

ಪತ್ರಕರ್ತ ಡಾ.ಶರಣು ಹುಲ್ಲೂರು ಬರೆದ, ಸಾವಣ್ಣ ಪ್ರಕಾಶನದ ‘ನೀನೇ ರಾಜಕುಮಾರ’ ಕೃತಿಯಲ್ಲಿ ಪುನೀತ್‌ ಬಾಲ್ಯವನ್ನು ಒಳಗೊಂಡ ‘ಲೋಹಿತ್ ಎಂಬ ಮರಿಮುದ್ದ’ ಅಧ್ಯಾಯವನ್ನು ಬಿ.ಕಾಂ ಪದವಿಯ ಮೂರನೇ ಸೆಮಿಸ್ಟರ್‌ನ ಕನ್ನಡ ಭಾಷಾ ಪಠ್ಯ ‘ವಾಣಿಜ್ಯ ಕನ್ನಡ 3’ಯಲ್ಲಿ ಸೇರಿಸಲಾಗಿದೆ. ಡಾ.ಮುನಿಯಪ್ಪ ಈ ಪಠ್ಯಪುಸ್ತಕದ ಪ್ರಧಾನ ಸಂಪಾದಕರು. ಡಾ.ಅಮರೇಂದ್ರ ಶೆಟ್ಟಿ, ಡಾ.ಕ.ನಿಂ. ಹೊಯ್ಸಳಾದಿತ್ಯ, ಡಾ.ಶಿವರಾಜ ಹಾಗೂ ಡಾ.ಬಿ.ಆರ್.ರಘುನಂದನ್‌ ಅವರು ಪಠ್ಯದ ಸಂಪಾದಕರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT