ಬೆಂಗಳೂರು: ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಪುಟ್ಟರಂಗಶೆಟ್ಟಿ ಅವರ ಕಚೇರಿ ‘ಲಂಚದ ಪ್ರಕರಣ’ ದಲ್ಲಿ ಬಂಧಿತರಾಗಿರುವ ಟೈಪಿಸ್ಟ್ ಮೋಹನ್ ಕುಮಾರ್ ಅವರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.
ಎಸಿಬಿ ಅಧಿಕಾರಿಗಳು ಬಂಧಿಸಿದ್ದ ಮೋಹನ್ ಕುಮಾರ್ ಅವರನ್ನು ನ್ಯಾಯಾಲಯ ಎರಡು ದಿನ ಪೊಲೀಸ್ ವಶಕ್ಕೆ ನೀಡಿತ್ತು. ಸತತ ಎರಡು ದಿನಗಳ ವಿಚಾರಣೆ ಬಳಿಕ ಶುಕ್ರವಾರ ಕೋರ್ಟ್ಗೆ ಹಾಜರುಪಡಿಸಲಾಯಿತು.
ಮೋಹನ್ ಕುಮಾರ್ ವಿಧಾನಸೌಧ ಪೊಲೀಸರ ಮುಂದೆ ನೀಡಿದ್ದ ಹೇಳಿಕೆಯನ್ನೇ ಎಸಿಬಿ ಅಧಿಕಾರಿಗಳ ಮುಂದೆಯೂ ಪುನರುಚ್ಚರಿಸಿದ್ದಾರೆ.
ಸೋಮವಾರದ ಬಳಿಕ ಸಚಿವ ಪುಟ್ಟರಂಗಶೆಟ್ಟಿ ಅವರ ವಿಚಾರಣೆ ನಡೆಸುವುದಾಗಿ ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.