ಮೈಸೂರು: ನಗರದ ಗುರು ಪುಟ್ಟರಾಜ ಸಂಗೀತ ಸಭಾ ವತಿಯಿಂದ ನೀಡಲಾಗುವ 2018ನೇ ಸಾಲಿನ ‘ಪುಟ್ಟಶ್ರೀ ಸಮ್ಮಾನ’ ಪ್ರಶಸ್ತಿಗೆ ಧಾರವಾಡದ ತಬಲಾ ವಾದಕ ಕುಮಾರ ಹೇಮಂತ ಜೋಶಿ ಆಯ್ಕೆಯಾಗಿದ್ದಾರೆ.
ಪ್ರಶಸ್ತಿಯು ₹ 5 ಸಾವಿರ ನಗದು ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿದೆ. ಪಂಡಿತ ಪುಟ್ಟರಾಜ ಗವಾಯಿ ಅವರ 8ನೇ ಪುಣ್ಯ ಸ್ಮರಣೆ ಅಂಗವಾಗಿ ಡಿಸೆಂಬರ್ 2ರಂದು ಗಾನಭಾರತಿಯಲ್ಲಿ ನಡೆಯುವ ‘ಭೈರವದಿಂದ ಭೈರವಿ’ ಸಂಗೀತೋತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಸಭಾದ ಅಧ್ಯಕ್ಷ ಭೀಮಾಶಂಕರ ಬಿದನೂರ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.