ADVERTISEMENT

ಪಿಡಬ್ಲ್ಯುಡಿ: ಗುರುಪ್ರಸಾದ್‌ ಕಾರ್ಯದರ್ಶಿ

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2019, 19:19 IST
Last Updated 1 ಆಗಸ್ಟ್ 2019, 19:19 IST

ಬೆಂಗಳೂರು: ಲೋಕೋಪಯೋಗಿ ಇಲಾಖೆಯ ಕಾರ್ಯದರ್ಶಿಯಾಗಿ ಮುಖ್ಯ ಎಂಜಿನಿಯರ್‌ ಬಿ. ಗುರುಪ್ರಸಾದ್‌ ಅವರನ್ನು ಗುರುವಾರ ನೇಮಕ ಮಾಡಲಾಗಿದೆ. ಜತೆಗೆ, ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯ ಮುಖ್ಯ ಯೋಜನಾ ಅಧಿಕಾರಿ ಹೊಣೆಯನ್ನೂ ವಹಿಸಲಾಗಿದೆ.

ಕಾರ್ಯದರ್ಶಿಯಾಗಿದ್ದ ಕೆ.ಎಸ್‌.ಕೃಷ್ಣಾ ರೆಡ್ಡಿ ಹಾಗೂ ಮುಖ್ಯ ಯೋಜನಾ ಅಧಿಕಾರಿಯಾಗಿದ್ದ ಪ್ರಭಾಕರ ಎಚ್‌.ಚಿಣಿ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಇಬ್ಬರಿಗೂ ಹುದ್ದೆ ತೋರಿಸಿಲ್ಲ. ಜೆಡಿಎಸ್‌–ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಎಚ್‌.ಡಿ.ರೇವಣ್ಣ ಅವರ ಆಪ್ತ ಅಧಿಕಾರಿಗಳಿಗೆ 2–3 ಹುದ್ದೆಗಳನ್ನು ನೀಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT