ADVERTISEMENT

ಕತಾರ್‌: ಹೆಚ್ಚುವರಿ ವಿಮಾನಕ್ಕೆ ಮನವಿ

​ಪ್ರಜಾವಾಣಿ ವಾರ್ತೆ
Published 7 ಜೂನ್ 2020, 20:58 IST
Last Updated 7 ಜೂನ್ 2020, 20:58 IST

ಬೆಂಗಳೂರು: ಕೊರೊನಾ ಲಾಕ್‌ಡೌನ್ ಕಾರಣದಿಂದ ಕತಾರ್‌ನಲ್ಲಿ ಕನ್ನಡಿಗರು ತೀವ್ರ ಸಂಕಷ್ಟ ಎದುರಿಸುತ್ತಿದ್ದು, ಬೆಂಗಳೂರು ಹಾಗೂ ಮಂಗಳೂರಿಗೆ ಹೆಚ್ಚುವರಿ ವಿಮಾನಯಾನ ಸೌಲಭ್ಯ ಒದಗಿಸಬೇಕು’ ಎಂದು ಕತಾರ್‌ನಲ್ಲಿರುವ ಐಸಿಬಿಎಫ್ (ಭಾರತೀಯ ಸಮುದಾಯ ಹಿತೈಷಿ ಸಮಿತಿ) ಸರ್ಕಾರವನ್ನು ಆಗ್ರಹಿಸಿದೆ.

‘ಕೊರೊನಾ ಕಾರಣದಿಂದ ವಿದೇಶದಲ್ಲಿರುವ ಕನ್ನಡಿಗರಿಗೆ ಸರ್ಕಾರ ಸ್ಪಂದಿಸಿದೆ. ಅವರನ್ನು ತಾಯ್ನಾಡಿಗೆ ಕರೆಕೊಂಡು ಬರಲು ವಿಮಾನಯಾನ ಸೇವೆ ಕಲ್ಪಿಸಿದೆ. ದೋಹಾದಿಂದ ಬೆಂಗಳೂರಿಗೆ ಪ್ರತ್ಯೇಕ ವಿಮಾನ ನಿಗದಿಪಡಿಸಿದೆ. ಆದರೆ ಕತಾರ್‌ನಲ್ಲಿ ಕೊರೊನಾ ವ್ಯಾಪಕವಾಗಿ ಹರಡುತ್ತಿರುವುದರಿಂದ ಬಹುತೇಕ ಕನ್ನಡಿಗರು ಕೆಲಸ ಕಳೆದುಕೊಂಡು, ಜೀವನ ನಡೆಸಲು ಪರದಾಡುತ್ತಿದ್ದಾರೆ’ ಎಂದು ಸಮಿತಿಯ ಪ್ರತಿನಿಧಿ ಸುಬ್ರಮಣ್ಯ ಹೆಬ್ಬಾಗಿಲು ಮನವಿಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT