ಮಂಗಳೂರು: ‘ರಾಜ್ಯದಲ್ಲಿ ಮುಂದಿನ ಬಾರಿ ಬಿಜೆಪಿ 150 ಸ್ಥಾನ ಗೆದ್ದು ಅಧಿಕಾರ ಪಡೆಯುವುದು ನಿಶ್ಚಿತ. ಆದರೆ, ಕಾಂಗ್ರೆಸ್ನಲ್ಲಿ ಈಗಲೇ ಮುಖ್ಯಮಂತ್ರಿ ಸ್ಥಾನಕ್ಕೆ ಜಗಳ ಶುರುವಾಗಿದೆ. ನಾಲ್ಕು ಮಂದಿ ಮುಖ್ಯಮಂತ್ರಿಯಾಗುವ ಕನಸು ಕಾಣುತ್ತಿದ್ದಾರೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ಕುಮಾರ್ ಕಟೀಲ್ ಹೇಳಿದರು.
‘ಮುಂದಿನ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರನ್ನು ಡಿ.ಕೆ.ಶಿಯವರು ಮಲ್ಲಿಕಾರ್ಜುನ ಖರ್ಗೆ ಅವರನ್ನು ಡಾ. ಪರಮೇಶ್ವರ್ ಸೋಲಿಸಲಿದ್ದಾರೆ’ ಎಂದರು.
‘ಪರಿಷತ್ ಚುನಾವಣೆಯಲ್ಲಿ ಬಿಜೆಪಿ 15ಕ್ಕಿಂತ ಅಧಿಕ ಸ್ಥಾನ ಗೆಲ್ಲುವ ವಿಶ್ವಾಸವಿದೆ. ಯಾವುದೇ ಪಕ್ಷದ ಜತೆ ಒಳ ಒಪ್ಪಂದವಿಲ್ಲ. ಕಾಂಗ್ರೆಸ್ ಸೋಲಿನ ಭೀತಿಯಲ್ಲಿದೆ. ಒಳ ಒಪ್ಪಂದದ ರಾಜಕೀಯ ಮಾಡುತ್ತಿದೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.