ADVERTISEMENT

ರಾಜ್ಯದಲ್ಲಿ ‘ಕೆ–23 ಗ್ಯಾಂಗ್‌’ಗೆ ಮಾಜಿ ಸಂಸದೆ ರಮ್ಯಾ ಮುಹೂರ್ತ: ಅಶೋಕ ವ್ಯಂಗ್ಯ

​ಪ್ರಜಾವಾಣಿ ವಾರ್ತೆ
Published 14 ಮೇ 2022, 2:27 IST
Last Updated 14 ಮೇ 2022, 2:27 IST
ಕಂದಾಯ ಸಚಿವ ಆರ್‌.ಅಶೋಕ
ಕಂದಾಯ ಸಚಿವ ಆರ್‌.ಅಶೋಕ   

ಬೆಂಗಳೂರು: ಕಾಂಗ್ರೆಸ್‌ನಲ್ಲಿ ಜಿ–23 ಇದ್ದ ಹಾಗೆ ಕರ್ನಾಟಕ ಕಾಂಗ್ರೆಸ್‌ನಲ್ಲಿ ಕೆ–23 ಭಿನ್ನಮತೀಯ ಗ್ಯಾಂಗ್‌ ಆರಂಭವಾಗುತ್ತಿದ್ದು, ಇದಕ್ಕೆ ಮಾಜಿ ಸಂಸದೆ ರಮ್ಯಾ ಇದಕ್ಕೆ ಮುಹೂರ್ತ ಇಟ್ಟಿದ್ದಾರೆ ಎಂದು ಕಂದಾಯ ಸಚಿವ ಆರ್‌.ಅಶೋಕ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ, ‘ಕಾಂಗ್ರೆಸ್‌ ಮನೆಯೊಂದು ಮೂರು ಬಾಗಿಲು ಎಂಬಂತಾಗಿದೆ. ಡಿ.ಕೆ.ಶಿವಕುಮಾರ್‌ ಮತ್ತು ಸಿದ್ದರಾಮಯ್ಯ ಅವರದು ಒಂದೊಂದು ಬಾಗಿಲು ಆಗಿದ್ದರೆ, ರಮ್ಯಾ ಮೂರನೇ ಬಾಗಿಲು’ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT