ADVERTISEMENT

ದೇವೇಗೌಡ್ರು ಸುಳ್ಳು ಹೇಳೋದ್ರಲ್ಲಿ ಎತ್ತಿದ ಕೈ: ಆರ್. ಅಶೋಕ್

​ಪ್ರಜಾವಾಣಿ ವಾರ್ತೆ
Published 29 ಮಾರ್ಚ್ 2019, 8:43 IST
Last Updated 29 ಮಾರ್ಚ್ 2019, 8:43 IST
   

ಬೆಂಗಳೂರು: ಜೆಡಿಎಸ್‌ ವರಿಷ್ಠ ಎಚ್‌.ಡಿ ದೇವೇಗೌಡ ಅವರು ಸುಳ್ಳು ಹೇಳೋದ್ರಲ್ಲಿ, ಕಣ್ಣೀರು ಹಾಕೋದ್ರಲ್ಲಿ ಎತ್ತಿದ ಕೈ ಎಂದು ಶಾಸಕ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ರಾಷ್ಟ್ರೀಯ ಅಧ್ಯಕ್ಷರಾದ ಅಮಿತ್ ಶಾ ಮೇಲೆ ದೇವೇಗೌಡ್ರು ತೇಜೋವಧೆ ಮಾಡಿದ್ದಾರೆ. ಇದು ಸರಿಯಲ್ಲ, ಅಮಿತ್ ಶಾ ಮೇಲೆ ಮಾತನಾಡಿರೋದನ್ನ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.

ಗುತ್ತಿಗೆದಾರರ ಮೇಲೆ ಐಟಿ ದಾಳಿ ನಡೆಸಿದ್ರೆ ಇವರಿಗೇನು ನೋವು..? ಎಂದೂ ಪ್ರಶ್ನಿಸಿದರು.

ADVERTISEMENT

ಬಿಜೆಪಿ ಉಸ್ತುವಾರಿ ಮುರುಳೀಧರರಾವ್ ಹಾಗೂ ಪಕ್ಷದ ಅಭ್ಯರ್ಥಿ ತೇಜಸ್ವಿ ಸೂರ್ಯ ಬಂದು ಭೇಟಿಯಾಗಿದ್ದರು. ಪಕ್ಷ ಮೊದಲು, ವ್ಯಕ್ತಿ ನಂತರ. ನರೇಂದ್ರ ಮೋದಿಯವರೇ ನಮಗೆ ಎಲ್ಲ ಕ್ಷೇತ್ರಗಳಲ್ಲೂ ಅಭ್ಯರ್ಥಿ. ಮೋದಿಯವರನ್ನು ಮತ್ತೆ ಪ್ರಧಾನಿಯಾಗಿ ಮಾಡಬೇಕು. ಹಾಗಾಗಿ ಬೆಂಗಳೂರು ದಕ್ಷಿಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ಪ್ರಚಾರ ಮಾಡುತ್ತೇವೆ. ತೇಜಸ್ವಿನಿ ಅನಂತಕುಮಾರ್ ಅವರಿಗೆ ಅನ್ಯಾಯವಾಗಿದೆ. ಆದರೂ ಪಕ್ಷ ಮೊದಲು ಹಾಗಾಗಿ ಅವರನ್ನೂ ಸಮಾಧಾನ ಪಡಿಸುವ ಪ್ರಯತ್ನ ಮಾಡುತ್ತೇವೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.