ADVERTISEMENT

ರಾಜೀನಾಮೆ ಹಿಂಪಡೆದ ರವೀಂದ್ರನಾಥ್

​ಪ್ರಜಾವಾಣಿ ವಾರ್ತೆ
Published 6 ನವೆಂಬರ್ 2020, 17:08 IST
Last Updated 6 ನವೆಂಬರ್ 2020, 17:08 IST
ಎಡಿಜಿಪಿ ರವೀಂದ್ರನಾಥ್
ಎಡಿಜಿಪಿ ರವೀಂದ್ರನಾಥ್   

ಬೆಂಗಳೂರು: ಮುಂಬಡ್ತಿ ನೀಡಲಿಲ್ಲ ಎಂಬ ಕಾರಣಕ್ಕೆ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದ ಎಡಿಜಿಪಿ ರವೀಂದ್ರನಾಥ್‌ ಅವರು ರಾಜೀನಾಮೆಯನ್ನು ಹಿಂದಕ್ಕೆ ಪಡೆದಿದ್ದಾರೆ.

ಶುಕ್ರವಾರ ಬೆಳಿಗ್ಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ರವೀಂದ್ರನಾಥ್‌ ಅವರು, ಬಡ್ತಿಯಲ್ಲಿ ತಮಗೆ ಅನ್ಯಾಯವಾಗಿದೆ ಎಂದು ದೂರು ಹೇಳಿಕೊಂಡರು. ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ‘ನಿಮಗೆ ಆಗಿರುವ ಅನ್ಯಾಯ ಸರಿಪಡಿಸಲು ಅಧಿಕಾರಿಗಳ ಜತೆ ಮಾತನಾಡುತ್ತೇನೆ, ಮೊದಲು ರಾಜೀನಾಮೆ ಹಿಂದಕ್ಕೆ ಪಡೆಯಿರಿ’ ಎಂದು ಸೂಚಿಸಿದರು.

ಆ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ರವೀಂದ್ರನಾಥ್, ‘ಅನ್ಯಾಯ ಸರಿಪಡಿಸುವುದಾಗಿ ಮುಖ್ಯಮಂತ್ರಿಯವರು ಭರವಸೆ ನೀಡಿದ್ದಾರೆ. ರಾಜೀನಾಮೆ ಹಿಂಪಡೆದಿದ್ದೇನೆ’ ಎಂದು ಹೇಳಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.