ADVERTISEMENT

ರಾಹುಲ್ ಸಭೆ: ದೆಹಲಿಗೆ ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 18 ಮೇ 2019, 20:07 IST
Last Updated 18 ಮೇ 2019, 20:07 IST
   

ಬೆಂಗಳೂರು: ರಾಜ್ಯದಲ್ಲಿನ ರಾಜಕೀಯ ವಿದ್ಯಮಾನಗಳ ಕುರಿತುಚರ್ಚಿಸಲು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಮತ್ತು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಅಧ್ಯಕ್ಷ ಸಿದ್ದರಾಮಯ್ಯ ಶನಿವಾರ ಸಂಜೆ ದೆಹಲಿಗೆ ದಿಢೀರ್‌ ತೆರಳಿದರು.

ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ ಮತ್ತು ಸಚಿವ ಡಿ.ಕೆ. ಶಿವಕುಮಾರ್‌ ಕೂಡಾ ಭಾನುವಾರ ಬೆಳಿಗ್ಗೆ ದೆಹಲಿ ತಲುಪಿದ್ದಾರೆ.

ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಸಂಭಾವ್ಯ ಫಲಿತಾಂಶ, ಜೆಡಿಎಸ್‌ ಜತೆಗಿನ ಮೈತ್ರಿಯಿಂದಾಗಬಹುದಾದ ಲಾಭ–ನಷ್ಟ ಹಾಗೂ ಮಿತ್ರ ಪಕ್ಷಗಳ ನಾಯಕರ ಗೊಂದಲಕಾರಿ ಹೇಳಿಕೆ, ಅದು ಮೈತ್ರಿ ಸರ್ಕಾರದ ಮೇಲೆ ಬೀರಬಹುದಾದ ಪರಿಣಾಮಗಳ ಬಗ್ಗೆಯೂ ತಮ್ಮ ನಾಯಕನ ಜತೆ ರಾಜ್ಯ ನಾಯಕರು ಚರ್ಚಿಸುವ ಸಂಭವ ಇದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.