ಮೈಸೂರು: ಎಐಸಿಸಿ ಅಧ್ಯಕ್ಷ ಸ್ಥಾನದಿಂದ ಪಲಾಯನ ಮಾಡಿರುವ ರಾಹುಲ್ ಗಾಂಧಿ ಸಂಸತ್ತಿಗೆ ಬಂದು ಚರ್ಚೆಯಲ್ಲಿ ಭಾಗವಹಿಸಲಿ. ನಂತರ, ದೇಶದ ವಿದ್ಯಮಾನಗಳ ಕುರಿತು ಪ್ರತಿಕ್ರಿಯಿಸಲಿ ಎಂದು ಸಂಸದ ವಿ.ಶ್ರೀನಿವಾಸಪ್ರಸಾದ್ ಟೀಕಿಸಿದರು.
‘ಭಾರತವು ಈಗ ಅತ್ಯಾಚಾರಗಳ ರಾಜಧಾನಿಯಾಗಿದೆ’ ಎಂದು ರಾಹುಲ್ ನೀಡಿದ ಹೇಳಿಕೆ ಕುರಿತು ಮೈಸೂರಿನಲ್ಲಿ ಭಾನುವಾರ ಈ ರೀತಿ ಪ್ರತಿಕ್ರಿಯಿಸಿದರು.
ಪ್ರಪಂಚ ಮುಳುಗಲ್ಲ: ಹುಣಸೂರು ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಚ್.ವಿಶ್ವನಾಥ್ ಜಯ ಗಳಿಸಲಿದ್ದಾರೆ. ಒಂದು ವೇಳೆ ಅವರು ಸೋತರೂ ಪ್ರಪಂಚ ಏನೂ ಮುಳುಗದು. ಹುಣಸೂರು ಕ್ಷೇತ್ರದಲ್ಲಿ ಸೋಲು ಎದುರಾದರೂ ಸರ್ಕಾರದ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.