ADVERTISEMENT

ದೆಹಲಿ ಮತ್ತು ಸುತ್ತಮುತ್ತಲಿನ ರಾಜ್ಯದ ಕನ್ನಡಿಗರಿಗೆ ವಿಶೇಷ ರೈಲು ವ್ಯವಸ್ಥೆ

ರೈಲ್ವೆ ಸಚಿವರೊಂದಿಗೆ ಡಿ.ವಿ. ಸದಾನಂದ ಗೌಡ ಮಾತುಕತೆ

​ಪ್ರಜಾವಾಣಿ ವಾರ್ತೆ
Published 8 ಮೇ 2020, 20:47 IST
Last Updated 8 ಮೇ 2020, 20:47 IST
   

ನವದೆಹಲಿ: ಲಾಕ್‌ಡೌನ್‌ನಿಂದ ದೆಹಲಿ ಮತ್ತು ಸುತ್ತಮುತ್ತಲಿನ ರಾಜ್ಯಗಳಲ್ಲಿ ಸಿಲುಕಿಕೊಂಡಿರುವ ಕನ್ನಡಿಗರನ್ನು ಕರ್ನಾಟಕಕ್ಕೆ ವಾಪಸ್ ಕರೆತರಲು ಕರ್ನಾಟಕದಿಂದ ವಿಶೇಷ ರೈಲು ಸಂಚಾರಕ್ಕೆ ರೈಲ್ವೆ ಇಲಾಖೆ ಒಪ್ಪಿಗೆ ನೀಡಿದೆ.

ಈ ಸಂಬಂಧ ಕೇಂದ್ರ ರೈಲ್ವೆ ಸಚಿವ ಪಿಯೂಶ್ ಗೋಯೆಲ್ ಅವರೊಂದಿಗೆ ಮಾತುಕತೆ ನಡೆಸಿರುವುದಾಗಿ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ. ಸದಾನಂದಗೌಡ ‘ಪ್ರಜಾವಾಣಿ’ಗೆ ತಿಳಿಸಿದರು.

‘ಒಟ್ಟು ಪ್ರಯಾಣಿಕರ ಸಾಮರ್ಥ್ಯ ಶೇ 90ರಷ್ಟು ಕಡಿಮೆ ಇದ್ದರೂ ವಿಶೇಷ ರೈಲು ವ್ಯವಸ್ಥೆ ಮಾಡುವಂತೆ ಗೋಯೆಲ್ ಅವರನ್ನು ವಿನಂತಿಸಿಕೊಂಡಿದ್ದೇನೆ. ಇದಕ್ಕೆ ಅವರು ಒಪ್ಪಿಗೆ ನೀಡಿದ್ದಾರೆ’ ಎಂದು ಅವರು ಹೇಳಿದರು.

ADVERTISEMENT

‘ಸೇವಾಸಿಂಧುಕರ್ನಾಟಕ (sevasinduKarnataka) ವೆಬ್‌ಸೈಟಿಗೆ ಇದುವರೆಗೆ ದೆಹಲಿಯಲ್ಲಿರುವ 680 ಕನ್ನಡಿಗರು ನೋಂದಣಿ ಮಾಡಿಕೊಂಡಿದ್ದಾರೆ. ಹರಿಯಾಣ, ನೋಯ್ಡಾ, ಪಂಜಾಬ್, ಚಂಡೀಗಡಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ಕರೆತರಲು ದೆಹಲಿಯ ಕರ್ನಾಟಕದ ಭವನದ ಅಧಿಕಾರಿಗಳಿಗೆ ಕೋರಿದ್ದೇನೆ. ಅವರೂ ಬಂದಲ್ಲಿ ಈ ಸಂಖ್ಯೆ ಹೆಚ್ಚಬಹುದು’ ಎಂದು ಅವರು ತಿಳಿಸಿದರು.

ದೆಹಲಿ ಅಕ್ಕಪಕ್ಕದ ರಾಜ್ಯದಲ್ಲಿರುವ ಕನ್ನಡಿಗರು ದೆಹಲಿಗೆ ಬರಲು ಬೇಕಾಗಿರುವ ಅಗತ್ಯ ಪಾಸುಗಳ ವ್ಯವಸ್ಥೆ ಮಾಡಲು ಅಧಿಕಾರಿಗಳು ನೆರೆ ರಾಜ್ಯದವರೊಂದಿಗೆ ಮಾತನಾಡಿದ್ದಾರೆ ಎಂದು ಅವರುಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.