ADVERTISEMENT

ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ

ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಲ್ಲೇನಹಳ್ಳಿಯಲ್ಲಿ ಆಚರಣೆ

​ಪ್ರಜಾವಾಣಿ ವಾರ್ತೆ
Published 17 ಜುಲೈ 2019, 20:11 IST
Last Updated 17 ಜುಲೈ 2019, 20:11 IST
ಕುಶಾಲನಗರ ಸಮೀಪದ ಮಲ್ಲೇನಹಳ್ಳಿ ಗ್ರಾಮದಲ್ಲಿ ಕಪ್ಪೆಗಳಿಗೆ ಮದುವೆ ಮಾಡಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು
ಕುಶಾಲನಗರ ಸಮೀಪದ ಮಲ್ಲೇನಹಳ್ಳಿ ಗ್ರಾಮದಲ್ಲಿ ಕಪ್ಪೆಗಳಿಗೆ ಮದುವೆ ಮಾಡಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು   

ಕುಶಾಲನಗರ: ಸಮೀಪದ ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಲ್ಲೇನಹಳ್ಳಿಯಲ್ಲಿ ಮಳೆಗಾಗಿ ಪ್ರಾರ್ಥಿಸಿ ಮಂಗಳವಾರ ಕಪ್ಪೆಗಳಿಗೆ ಮದುವೆ ಮಾಡಲಾಯಿತು.

ಜಿಲ್ಲೆಯಲ್ಲಿ ಮುಂಗಾರು ಮಳೆ ದುರ್ಬಲಗೊಂಡಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರು ಗಂಡು ಮತ್ತು ಹೆಣ್ಣು ಕಪ್ಪೆಗಳನ್ನು ಹಿಡಿದು ಗ್ರಾಮದ ಪೈಸಾರಿಯಲ್ಲಿ ಮರದ ಕೆಳಗೆ ಹಸಿರು ಚಪ್ಪರ ಹಾಕಿ ಎರಡು ಕಪ್ಪೆಗಳಿಗೂ ಶಾಸ್ತ್ರೋಕ್ತವಾಗಿ ಮದುವೆ ಮಾಡಲಾಯಿತು.

ಜೋಡಿ ಕಪ್ಪೆಗಳನ್ನು ವಿಶೇಷ ಅಲಂಕಾರದೊಂದಿಗೆ ಮೆರವಣಿಗೆ ಮಾಡಿದರು. ಈ ಮದುವೆ ಕಾರ್ಯಕ್ರಮದಲ್ಲಿ ಸುತ್ತಮುತ್ತಲಿನ ರೈತರು ಹಾಗೂ ಮಹಿಳೆಯರು ಪಾಲ್ಗೊಂಡರು. ಎಲ್ಲರಿಗೂ ಊಟದ ವ್ಯವಸ್ಥೆ ಮಾಡಲಾಗಿತ್ತು.

ADVERTISEMENT

ಗೋವಿಂದರಾಜ್, ರಂಗಸ್ವಾಮಿ, ಮಂಜುನಾಥ್, ರಾಮು, ರವಿ, ನಾಗಮ್ಮ, ಜ್ಯೋತಿ, ರಮೇಶ್, ವೆಂಕಟೇಶ್, ಸುಶೀಲಾ, ಶೋಭಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.