ADVERTISEMENT

ನಾಳೆಯಿಂದ ಭಾರಿ ಮಳೆ ಸಾಧ್ಯತೆ

​ಪ್ರಜಾವಾಣಿ ವಾರ್ತೆ
Published 22 ಜುಲೈ 2020, 9:11 IST
Last Updated 22 ಜುಲೈ 2020, 9:11 IST
ಬೆಂಗಳೂರಿನಲ್ಲಿ ಮಳೆ (ಸಂಗ್ರಹ ಚಿತ್ರ)
ಬೆಂಗಳೂರಿನಲ್ಲಿ ಮಳೆ (ಸಂಗ್ರಹ ಚಿತ್ರ)   

ಬೆಂಗಳೂರು: ರಾಜ್ಯದ ಒಳನಾಡಿನಲ್ಲಿ ನೈರುತ್ಯ ಮುಂಗಾರು ಚುರುಕುಗೊಂಡಿರುವುದರಿಂದ ಜು.23ರಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಜು.22ರಂದು ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಮಳೆ ತಗ್ಗಲಿದ್ದು, ತುಮಕೂರು, ಶಿವಮೊಗ್ಗ, ಕೋಲಾರ, ಕೊಡಗು, ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಬಹುದು.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಹಾವೇರಿ, ಕಲಬುರ್ಗಿ, ವಿಜಯಪುರ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಗುರುವಾರದಂದು ಭಾರಿ ಮಳೆಯಾಗುವ ನಿರೀಕ್ಷೆ ಇರುವುದರಿಂದ 'ಯೆಲ್ಲೊ ಅಲರ್ಟ್' ಘೋಷಿಸಲಾಗಿದೆ.

ADVERTISEMENT

ಮಳೆ-ಎಲ್ಲಿ, ಎಷ್ಟು?: ಚಿತ್ರದುರ್ಗದಲ್ಲಿ ಗರಿಷ್ಠ 7 ಸೆಂ.ಮೀ ಮಳೆಯಾಗಿದೆ. ರಾಯಚೂರು 5, ಬೆಳಗಾವಿ 4, ಹಿರೇಕೆರೂರು, ಚಿಂಚೋಳಿ, ಗೌರಿಬಿದನೂರು, ಚನ್ನಪಟ್ಟಣ, ಭಾಗಮಂಡಲ, ಹೊಸನಗರ 3, ಸುಳ್ಯ, ಭಟ್ಕಳ, ಹಾವೇರಿ, ನರಗುಂದ, ಧಾರವಾಡ, ಬೆಂಗಳೂರು, ಪಾವಗಡ, ಕೊಳ್ಳೇಗಾಲ, ಆನೇಕಲ್, ಕನಕಪುರ 2, ಉಪ್ಪಿನಂಗಡಿ, ಹೊಸಪೇಟೆ, ದಾವಣಗೆರೆ, ಭರಮಸಾಗರ, ಮೈಸೂರು, ತೀರ್ಥಹಳ್ಳಿ, ಭದ್ರಾವತಿ, ಹಾಸನ ಹಾಗೂ ರಾಮನಗರದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.