ಬೆಂಗಳೂರು: ‘ನೈರುತ್ಯ ಮುಂಗಾರು ಮಾರುತಗಳು ರಾಜ್ಯದುದ್ದಕ್ಕೂ ಪ್ರವೇಶಿಸಿದ್ದು,ಜೂನ್ 6ರಂದು ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂಗಾರು ಅಬ್ಬರಿಸಲಿದೆ’ ಎಂದು ಹವಾಮಾನ ಇಲಾಖೆ ತಿಳಿಸಿದೆ.
‘ಶನಿವಾರ ಉತ್ತರ ಒಳನಾಡು ಪ್ರವೇಶಿಸಲಿದೆ. ಜೂ.6ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ’ ಎಂದು ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.
‘ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಮುನ್ಸೂಚನೆ ಇದ್ದು, ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಕೊಡಗು, ಯಾದಗಿರಿ, ರಾಯಚೂರು, ಕೊಪ್ಪಳ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ’ ಎಂದೂ ಮಾಹಿತಿ ನೀಡಿದರು.
ಮಳೆ–ಎಲ್ಲಿ, ಎಷ್ಟು?: ಕುಂದಾಪುರದಲ್ಲಿ ಶನಿವಾರ ಗರಿಷ್ಠ 9 ಸೆಂ.ಮೀ ಮಳೆಯಾಗಿದೆ. ಪಣಂಬೂರು 7, ಬೀದರ್ 5, ಬೆಂಗಳೂರು, ಮಂಡ್ಯ, ಶಿರಾ, ಕೋಲಾರ 4, ಮೂಡುಬಿದರೆ, ಸಂಕೇಶ್ವರ, ನೆಲಮಂಗಲ, ಚಿಂತಾಮಣಿ 3, ಕಲಬುರ್ಗಿ, ತಿಪಟೂರು, ಮಧುಗಿರಿ, ವಿರಾಜಪೇಟೆ, ಶಿಡ್ಲಘಟ್ಟ, ಹರಪನಹಳ್ಳಿ, ಕೂಡ್ಲಿಗಿ 2, ಸಿದ್ದಾಪುರ, ನರಗುಂದ, ಚಿಂಚೋಳಿ, ಕಮಲಾಪುರ, ಕಡೂರು, ಚನ್ನಗಿರಿ, ಚಿತ್ರದುರ್ಗ ಹಾಗೂ ಭಾಗಮಂಡಲದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.