ADVERTISEMENT

ಬೆಂಗಳೂರಿನಲ್ಲಿ ಮಳೆ: ಮೇಲ್ಸೇತುವೆಯಲ್ಲಿ ಹರಿದ ನೀರು

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2020, 14:54 IST
Last Updated 20 ಮಾರ್ಚ್ 2020, 14:54 IST
ಶುಕ್ರವಾರ ಮಳೆ ಬಿದ್ದ ಪರಿಣಾಮ ಮೈಸೂರು ರಸ್ತೆ ಮೇಲ್ಸೇತುವೆಯಲ್ಲಿ ನೀರು ನಿಂತು ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.
ಶುಕ್ರವಾರ ಮಳೆ ಬಿದ್ದ ಪರಿಣಾಮ ಮೈಸೂರು ರಸ್ತೆ ಮೇಲ್ಸೇತುವೆಯಲ್ಲಿ ನೀರು ನಿಂತು ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.   

ಬೆಂಗಳೂರು: ನಗರದಲ್ಲಿ ಕೆಲ ದಿನಗಳಿಂದ ತಾಪಮಾನ ಹೆಚ್ಚಾಗಿದ್ದು, ಇದರ ನಡುವೆಯೇ ಶುಕ್ರವಾರ ಸಂಜೆ ಮಳೆ ಸುರಿದು ತಂಪೆರೆಯಿತು.

ಸಂಪಂಗಿರಾಮನಗರ, ಶಾಂತಿನಗರ, ಗಾಂಧಿನಗರ, ಎಂ.ಜಿ.ರಸ್ತೆ, ಇಂದಿರಾನಗರ, ಹಲಸೂರು ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ತುಂತುರು ಮಳೆ ಆಯಿತು.

ಬಳ್ಳಾರಿ ರಸ್ತೆಯಲ್ಲಿರುವ ಪ್ರದೇಶಗಳಲ್ಲಿ ಜೋರು ಮಳೆ ಸುರಿಯಿತು. ಬ್ಯಾಟರಾಯನಪುರ ಮೇಲ್ಸೇತುವೆಯಲ್ಲೇ ನೀರು ಹರಿಯಿತು. ನೀರಿನಲ್ಲೇ ವಾಹನಗಳು ಸಂಚರಿಸಿದವು. ಸಂಚಾರ ಪೊಲೀಸರೇ ಮೇಲ್ಸೇತುವೆಯಲ್ಲಿ ನೀರು ಹೋಗಲು ಜಾಗ ಮಾಡಿದರು. ಕೆಲ ಗಂಟೆಗಳ ಬಳಿಕವೇ ಮೇಲ್ಸೇತುವೆ ಯಥಾಸ್ಥಿತಿಗೆ ಬಂತು.

ADVERTISEMENT

ಬೆಳಿಗ್ಗೆಯಿಂದಲೇನಗರದಲ್ಲಿ ಬಿಸಿಲಿನ ತಾಪ ಹೆಚ್ಚಿತ್ತು. ಸಂಜೆ ವೇಳೆಗೆ ಮೋಡ ಮುಸುಕಿದ ವಾತಾವರಣದೊಂದಿಗೆ ಜೋರು ಗಾಳಿ ಬೀಸಿತು. ನಂತರ, ಜಿನುಗು ಮಳೆ ಶುರುವಾಯಿತು. ಕೆಲವೆಡೆ ಜೋರಾಗಿಯೇ ಸುರಿಯಿತು.

‘ಬ್ಯಾಟರಾಯನಪುರ ಮೇಲ್ಸೇತುವೆ ಸೇರಿ ಕೆಲವೆಡೆ ನೀರು ನಿಂತ ಬಗ್ಗೆ ದೂರುಗಳು ಬಂದಿದ್ದವು. ಮಳೆ ನಿಂತ ಕೆಲವೇ ಗಂಟೆಗಳಲ್ಲಿ ನೀರು ಹರಿದುಹೋಗಿದೆ.ಇದನ್ನು ಹೊರತು ಪಡಿಸಿ ಯಾವುದೇ ಹಾನಿ ಸಂಭವಿಸಿದಬಗ್ಗೆ ದೂರುಗಳು ಬಂದಿಲ್ಲ’ ಎಂದು ಬಿಬಿಎಂಪಿ ಸಹಾಯವಾಣಿ ಸಿಬ್ಬಂದಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.