ADVERTISEMENT

ಕರ್ನಾಟಕ: ವಿವಿಧೆಡೆ ಉತ್ತಮ ಮಳೆ

​ಪ್ರಜಾವಾಣಿ ವಾರ್ತೆ
Published 25 ಮೇ 2021, 19:09 IST
Last Updated 25 ಮೇ 2021, 19:09 IST
   

ಬೆಂಗಳೂರು: ಕರಾವಳಿ ಜಿಲ್ಲೆಗಳು ಹಾಗೂ ಮೈಸೂರು, ಮಂಡ್ಯ, ಹಾಸನ ಜಿಲ್ಲೆಯ ವಿವಿಧೆಡೆ ಮಂಗಳವಾರ ಉತ್ತಮ ಮಳೆಯಾಗಿದೆ.

ಮೈಸೂರಿನಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ಬಿರುಸಿನ ಮಳೆಯಾಗಿದೆ. ಕೊಡಗು ಜಿಲ್ಲೆಯ ಗೋಣಿಕೊಪ್ಪಲು, ಪೊನ್ನಂಪೇಟೆ ಹಾಗೂ ಕುಟ್ಟ ಭಾಗದಲ್ಲಿ ಮಧ್ಯಾಹ್ನ ಉತ್ತಮವಾಗಿ ಸುರಿದಿದೆ.

ಹಾಸನ ಜಿಲ್ಲೆಯ ಆಲೂರು, ಬೇಲೂರು, ಸಕಲೇಶಪುರ ಮತ್ತು ಚನ್ನರಾಯಪಟ್ಟಣದ ಸುತ್ತಮುತ್ತ ಹಾಗೂ ಮಂಡ್ಯ ನಗರ ಹಾಗೂ ಜಿಲ್ಲೆಯ ನಾಗಮಂಗಲ ಸೇರಿದಂತೆ ಸುತ್ತಲಿನ ಗ್ರಾಮಗಳಲ್ಲಿ ಬಿರುಸಿನ ಮಳೆಯಾಗಿದೆ.

ADVERTISEMENT

ಮಂಗಳೂರು ನಗರದಲ್ಲಿ ಸಂಜೆ 6ರಿಂದ ಒಂದೂವರೆ ಗಂಟೆಗೂ ಅಧಿಕ ಕಾಲ ಮಳೆ ಸುರಿಯಿತು. ದಕ್ಷಿಣಕನ್ನಡ ಜಿಲ್ಲೆಯ ಮೂಲ್ಕಿ, ಬೆಳ್ತಂಗಡಿ, ಬಂಟ್ವಾಳದಲ್ಲಿ ಸಾಧಾರಣ ಮಳೆಯಾಗಿದೆ.

ಉಡುಪಿ ಜಿಲ್ಲೆಯ ಬ್ರಹ್ಮಾವರ, ಹಿಡಿಯಡಕದಲ್ಲಿ ಧಾರಾಕಾರ, ಉಪ್ಪೂರು, ಕೊಳಲಗಿರಿ, ಹಾವಂಜೆ, ಆರೂರು, ಪೇತ್ರಿ ಕರ್ಜೆ, ಪೆರ್ಡೂರು, ಅತ್ರಾಡಿ ಕೋಡಿಬೆಟ್ಟುವಿನಲ್ಲಿ ಉತ್ತಮ ಮಳೆ ಸುರಿದಿದೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ವಿವಿಧೆಡೆ ಮಳೆಯಾಗಿದ್ದು, ಶಿವಮೊಗ್ಗ ಜಿಲ್ಲೆಯ ಭದ್ರಾವತಿ, ಹೊಸನಗರ, ತೀರ್ಥಹಳ್ಳಿ, ಶಿಕಾರಿಪುರ, ಸೊರಬ ಸುತ್ತಮುತ್ತ ಸಾಧಾರಣ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.