ADVERTISEMENT

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ: ಸಿಡಿಲು ಬಡಿದು ನಾಲ್ವರ ಸಾವು

​ಪ್ರಜಾವಾಣಿ ವಾರ್ತೆ
Published 1 ಮೇ 2021, 21:54 IST
Last Updated 1 ಮೇ 2021, 21:54 IST
ದಕ್ಷಿಣ ಕನ್ನಡ ಜಿಲ್ಲೆಯ ಯೇನೆಕಲ್ಲಿನಲ್ಲಿ ಅಡಿಕೆ ಗಿಡ ನೆಲಕ್ಕೆ ಉರುಳಿವೆ
ದಕ್ಷಿಣ ಕನ್ನಡ ಜಿಲ್ಲೆಯ ಯೇನೆಕಲ್ಲಿನಲ್ಲಿ ಅಡಿಕೆ ಗಿಡ ನೆಲಕ್ಕೆ ಉರುಳಿವೆ   

ಬೆಂಗಳೂರು: ರಾಜ್ಯದ ಹಲವೆಡೆ ಶನಿವಾರ ಮಳೆಯಾಗಿದ್ದು, ಸಿಡಿಲು ಬಡಿದು ನಾಲ್ವರು ಸಾವಿಗೀಡಾಗಿದ್ದಾರೆ.

ಸಿಡಿಲು ಬಡಿದು ಕಲಬುರ್ಗಿ ಜಿಲ್ಲೆಯಲ್ಲಿ ಒಬ್ಬ ವ್ಯಕ್ತಿ ಮತ್ತು ಬೀದರ್‌ ಜಿಲ್ಲೆಯಲ್ಲಿ ಮಹಿಳೆ ಮೃತಪಟ್ಟಿದ್ದಾರೆ.

ಅಫಜಲಪುರ ತಾಲ್ಲೂಕಿನ ಬಡದಾಳ ಗ್ರಾಮದ ವ್ಯವಸಾಯ ಸಹಕಾರ ಸಂಘದ ನಿರ್ದೇಶಕ ಭೋಜರಾಜ ಅತನೂರ (54) ಹೂಲದಲ್ಲಿ ಕೃಷಿ ಚಟುವಟಿಕೆ ಮಾಡುವ ವೇಳೆ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ.

ADVERTISEMENT

ಔರಾದ್ತಾಲ್ಲೂಕಿನ ಮೆಡಪಳ್ಳಿ ಗ್ರಾಮದಲ್ಲಿ ಹೊಲದಿಂದ ಮನೆಗೆ ಬರುವಾಗ ಸಿಡಿಲು ಬಡಿದು ಅನಿತಾ ಬಸಯ್ಯ ಸ್ವಾಮಿ (35) ಮೃತಪಟ್ಟಿದ್ದಾರೆ.

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲ್ಲೂಕಿನ ಹಂಚಿನಾಳ ಗ್ರಾಮದ ಹೊಲವೊಂದರಲ್ಲಿ ಶನಿವಾರ ಸಿಡಿಲು ಬಡಿದು ಇಬ್ಬರು ಮೃತಪಟ್ಟಿದ್ದಾರೆ. ಕುರಿ ಮೇಯಿಸುತ್ತಿದ್ದ ಕೊಡ್ಲಿವಾಡದ ಹನಮಂತ ಕಾರಬಾರಿ (19), ಮಾಡಮಗೇರಿ ಗ್ರಾಮದ ಹೊನ್ನಪ್ಪ ಮಬನೂರ (14) ಮೃತರು. ಎರಡು ಕುರಿಗಳೂ ಮೃತಪ‍ಟ್ಟಿವೆ.

ಹಾವೇರಿಯ ಹತ್ತರಗೇರಿ ಓಣಿಯಲ್ಲಿರುವ ಸಾವಳಗಿ ಮಠದ ಸಮೀಪ ಮೂರು ತೆಂಗಿನ ಮರಗಳಿಗೆ ಸಿಡಿಲು ಬಡಿದಿದೆ. ಹುಬ್ಬಳ್ಳಿಯಲ್ಲಿ ಮನೆ ಗೋಡೆ ಕುಸಿದಿದೆ.

ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಹಲವೆಡೆ ಗುಡುಗು ಸಹಿತ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.