ADVERTISEMENT

ಶಿವಮೊಗ್ಗ, ಕೊಡಗಿನಲ್ಲಿ ಮತ್ತೆ ಚುರುಕುಗೊಂಡ ಮಳೆ

​ಪ್ರಜಾವಾಣಿ ವಾರ್ತೆ
Published 20 ಜುಲೈ 2021, 18:23 IST
Last Updated 20 ಜುಲೈ 2021, 18:23 IST
ಕಾರ್ಗಲ್ ಸಮೀಪದ ಜೋಗ ಜಲಪಾತದಲ್ಲಿ ಮುಂಗಾರು ಮಳೆಯ ಅಬ್ಬರಕ್ಕೆ ಜಲಸಿರಿ ಹೆಚ್ಚಿದ್ದು, ಮೋಡ ಮುಸುಕಿದ ಮಂಜಿನ ನಡುವೆ ಜಲಪಾತದ ಸಿರಿಯನ್ನು ಪ್ರವಾಸಿಗರು ಕಣ್ತುಂಬಿಕೊಂಡರು
ಕಾರ್ಗಲ್ ಸಮೀಪದ ಜೋಗ ಜಲಪಾತದಲ್ಲಿ ಮುಂಗಾರು ಮಳೆಯ ಅಬ್ಬರಕ್ಕೆ ಜಲಸಿರಿ ಹೆಚ್ಚಿದ್ದು, ಮೋಡ ಮುಸುಕಿದ ಮಂಜಿನ ನಡುವೆ ಜಲಪಾತದ ಸಿರಿಯನ್ನು ಪ್ರವಾಸಿಗರು ಕಣ್ತುಂಬಿಕೊಂಡರು   

ಬೆಂಗಳೂರು: ಶಿವಮೊಗ್ಗ, ಕೊಡಗು ಜಿಲ್ಲೆಯಲ್ಲಿ ಮಂಗಳವಾರ ಉತ್ತಮ ಮಳೆಯಾಗಿದ್ದರೆ, ಕರಾವಳಿ ಭಾಗದಲ್ಲಿ ಮಳೆಯ ಅಬ್ಬರ ಕಡಿಮೆಯಾಗಿದೆ.

ಶಿವಮೊಗ್ಗದ ಸಾಗರ, ಹೊಸನಗರ, ತೀರ್ಥಹಳ್ಳಿ ಭಾಗದಲ್ಲಿ ನಿರಂತರ ಮಳೆ ಸುರಿದಿದೆ. ಕೆಲವೆಡೆ ಮನೆಗಳು ಕುಸಿದಿವೆ.

ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಯಸಳೂರು ಹೋಬಳಿ ಚಂಗಡಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೌವಳ್ಳಿಯಲ್ಲಿ ಗಾಳಿ ಮಳೆಗೆ ತಡರಾತ್ರಿ ದಮಯಂತಿ ಎಂಬುವವರ ಮನೆಯ ಒಂದು ಭಾಗ ಸಂಪೂರ್ಣ ಕುಸಿದು ಬಿದ್ದಿದೆ. ಪಶ್ಚಿಮಘಟ್ಟದ
ಅಂಚಿನ ಗ್ರಾಮಗಳಲ್ಲಿ ಉತ್ತಮ ಮಳೆಯಾಗಿದೆ.

ADVERTISEMENT

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಾಸರಿ 2.8 ಸೆಂ.ಮೀ. ಮಳೆ ಸುರಿದಿದೆ. ಎರಡು ಮನೆಗಳಿಗೆ ಪೂರ್ಣ, ಮೂರು ಮನೆಗಳಿಗೆ ಭಾಗಶಃ ಹಾನಿಯಾಗಿದೆ. ನದಿಗಳಲ್ಲಿ ನೀರಿನ ಹರಿವು ಕಡಿಮೆಯಾಗಿದೆ.

ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಉಪ್ಪಿನಕುದ್ರು, ವಕ್ವಾಡಿ, ಕಾರ್ಕಳ ತಾಲ್ಲೂಕಿನ ನೀರೆ, ಹೆಬ್ರಿ ತಾಲ್ಲೂಕಿನ ಅಂಡಾರು ಗ್ರಾಮದಲ್ಲಿ ಮನೆಗಳಿಗೆ ಹಾನಿಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಸಾಧಾರಣ ಮಳೆ ಸುರಿದಿದ್ದು, ಅಲ್ಲಲ್ಲಿ ಮನೆಗಳಿಗೆ ಹಾನಿಯಾಗಿದೆ.

100 ಅಡಿ ದಾಟಿದ ಕೆಆರ್‌ಎಸ್‌

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ ಮಂಗಳವಾರ 100.05 ಅಡಿಗೆ ತಲುಪಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.