ಬೆಂಗಳೂರು:ರಾಜ್ಯದ ದಕ್ಷಿಣ ಒಳನಾಡು ಹಾಗೂ ತಮಿಳುನಾಡಿನ ಒಳನಾಡಿನಲ್ಲಿದ್ದ ವಾಯುಭಾರ ಕುಸಿತ ದುರ್ಬಲಗೊಂಡಿದ್ದು, ಮೇಲ್ಮೈ ಸುಳಿಗಾಳಿ ಸಕ್ರಿಯವಾಗಿದೆ. ಇದರಿಂದ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ನ.21ರಂದು ಭಾರಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮೇಲ್ಮೈ ಸುಳಿಗಾಳಿಯ ತೀವ್ರತೆ ತಗ್ಗಲಿರುವುದರಿಂದ ಮುಂದಿನ ಎರಡು ದಿನಗಳವರೆಗೆ ಮಾತ್ರ ರಾಜ್ಯದ ಕೆಲವೇ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ. ನ.23ರಿಂದ ಉತ್ತರ ಒಳನಾಡಿನಲ್ಲಿ ಮಳೆ ತಗ್ಗುವ ಸಾಧ್ಯತೆ ಇದ್ದು, ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಬಹುದು.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿಭಾನುವಾರ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇರುವುದರಿಂದ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ.
ಮಳೆ–ಎಲ್ಲಿ, ಎಷ್ಟು?: ಹಾವೇರಿ ಜಿಲ್ಲೆಯ ಕೆಲವರಕೊಪ್ಪ ಭಾಗದಲ್ಲಿ ಶನಿವಾರ 19 ಸೆಂ.ಮೀ ಗರಿಷ್ಠ ಮಳೆಯಾಗಿದೆ.
ಮಂಗಳೂರು, ಕಡೂರು, 16, ಹಾನಗಲ್ 13, ಹಿರೇಕೆರೂರು 9, ಶಿಡ್ಲಘಟ್ಟ 8, ಮದ್ದೂರು, ಬಂಗಾರಪೇಟೆ 7, ಹಾವೇರಿ, ಮಧುಗಿರಿ 6, ಕೋಲಾರ 5, ಸುಳ್ಯ, ಚಿತ್ರದುರ್ಗ, ದಾವಣಗೆರೆ, ಕಂಪ್ಲಿ 4, ಕಾರವಾರ, ಭಟ್ಕಳ, ಚಿಂತಾಮಣಿ, ಗುಡಿಬಂಡೆ, ಹಿರಿಯೂರು, ಮಾಲೂರು, ಸಾಗರ, ಶಿರಾ 3, ಮೂಡುಬಿದರೆ, ಮಾನ್ವಿ, ಗಂಗಾವತಿ, ಗದಗ, ಕೊಪ್ಪಳ, ನರಗುಂದ, ಗೌರಿಬಿದನೂರು, ತೊಂಡೆಬಾವಿ,ಪಾವಗಡ, ತಿಪಟೂರು, ಹೊಸಕೋಟೆ, ದೊಡ್ಡಬಳ್ಳಾಪುರ 2, ಪುತ್ತೂರು, ಕಾರ್ಕಳ, ಬಾಗಲಕೋಟೆ, ಹುಕ್ಕೇರಿ, ಚಿಕ್ಕೋಡಿ, ನೆಲಮಂಗಲ, ಶಿವಮೊಗ್ಗ, ಶ್ರೀರಂಗಪಟ್ಟಣ, ಮಂಡ್ಯ, ಚನ್ನಪಟ್ಟಣ, ಮಡಿಕೇರಿ, ಹಾಸನ, ಭದ್ರಾವತಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.