ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಸೆ.14ರಂದು ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ 'ಆರೆಂಜ್ ಅಲರ್ಟ್' ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಜಿಲ್ಲೆಗಳಲ್ಲಿ ಸೆ.18 ರವರೆಗೆ ಭಾರಿ ಮಳೆಯಾಗಲಿದೆ. ಈ ಭಾಗದಲ್ಲಿ ಗಂಟೆಗೆ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಇಲಾಖೆ ಎಚ್ಚರಿಸಿದೆ.
ಉತ್ತರ ಒಳನಾಡಿನ ಬೀದರ್, ಕಲಬುರ್ಗಿ ಹಾಗೂ ಯಾದಗಿರಿಯಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ 'ಯೆಲ್ಲೊ ಅಲರ್ಟ್' ಘೋಷಿಸಲಾಗಿದೆ. ದಕ್ಷಿಣ ಒಳನಾಡಿನಲ್ಲಿ ಸೆ.15 ರಿಂದ ಮಳೆ ತಗ್ಗಲಿದೆ.
ಮಳೆ-ಎಲ್ಲಿ,ಎಷ್ಟು?: ಉಡುಪಿ ಜಿಲ್ಲೆಯ ಸಿದ್ದಾಪುರ ಹಾಗೂ ಕುಂದಾಪುರದಲ್ಲಿ ತಲಾ 11 ಸೆಂ.ಮೀ ಮಳೆಯಾಗಿದೆ. ಸುಳ್ಯ 9, ಪುತ್ತೂರು, ಭಟ್ಕಳ 8, ಅಂಕೋಲಾ 7, ಭಾಗಮಂಡಲ, ಹೊಸನಗರ 6, ಉಪ್ಪಿನಂಗಡಿ, ಮೂಡುಬಿದರೆ, ಮಂಗಳೂರು, ಕಾರ್ಕಳ 5, ಉಡುಪಿ 4, ಗದಗ, ಕಾರವಾರ, ಚಿಂಚೋಳಿ, ಬೀದರ್ 3, ಹಾವೇರಿ, ಬೆಂಗಳೂರು, ಶಿರಾ 2, ಕುಶಾಲನಗರ, ಪಾವಗಡ, ಚಿಕ್ಕಬಳ್ಳಾಪುರ, ಸಕಲೇಶಪುರ, ಬಾಗೇಪಲ್ಲಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.