ADVERTISEMENT

ಕರಾವಳಿಯಲ್ಲಿ ಇಂದು ಹೆಚ್ಚು ಮಳೆ ಸಾಧ್ಯತೆ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2019, 20:18 IST
Last Updated 16 ಸೆಪ್ಟೆಂಬರ್ 2019, 20:18 IST
   

ಬೆಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ಸೆಪ್ಟೆಂಬರ್‌ 17ರಂದು ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಇದೇ 19ರವರೆಗೆ ಈ ಭಾಗದಲ್ಲಿ ವ್ಯಾಪಕ ಮಳೆಯಾಗಲಿದ್ದು, ‘ಯೆಲ್ಲೊ ಅಲರ್ಟ್‌’ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಹಲವೆಡೆ ಶನಿವಾರದವರೆಗೆ ಹಗುರಕ್ಕಿಂತ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನ ಹಲವು ಪ್ರದೇಶಗಳಲ್ಲೂ ಸೆ. 18 ಮತ್ತು 19ರಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.

ಸೋಮವಾರ ಉತ್ತರಕನ್ನಡ ಜಿಲ್ಲೆಯ ಮಂಕಿಯಲ್ಲಿ 8 ಸೆಂ.ಮೀ.ಮಳೆಯಾಗಿದೆ. ಗೋಕರ್ಣ, ಆಗುಂಬೆ 6,ಭಟ್ಕಳ 5, ಲಿಂಗನಮಕ್ಕಿ 4, ಮಂಗಳೂರಿನಲ್ಲಿ 3 ಸೆಂ.ಮೀ.ಮಳೆಯಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.