ADVERTISEMENT

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇದೇ 14ರವರೆಗೆ ಭಾರಿ ಮಳೆ ಸಾಧ್ಯತೆ

​ಪ್ರಜಾವಾಣಿ ವಾರ್ತೆ
Published 9 ಜುಲೈ 2020, 13:51 IST
Last Updated 9 ಜುಲೈ 2020, 13:51 IST
ಮಳೆಯೊಂದರ ಸನ್ನಿವೇಶ (ಪ್ರಾತಿನಿಧಿಕ ಚಿತ್ರ)
ಮಳೆಯೊಂದರ ಸನ್ನಿವೇಶ (ಪ್ರಾತಿನಿಧಿಕ ಚಿತ್ರ)   

ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು ಚುರುಕುಗೊಂಡಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಜು.10ರಿಂದ 14ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

'ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, 'ಯೆಲ್ಲೊ ಅಲರ್ಟ್' ಘೋಷಿಸಲಾಗಿದೆ' ಎಂದು ಇಲಾಖೆಯ ನಿರ್ದೇಶಕ ಸಿ.ಎಸ್.ಪಾಟೀಲ ತಿಳಿಸಿದರು.

'ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ,ತುಮಕೂರು ಹಾಗೂಕರಾವಳಿ ಜಿಲ್ಲೆಗಳಲ್ಲಿ ಶುಕ್ರವಾರ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಕೆಲವೆಡೆ ಸಾಧಾರಣ ಮಳೆಯಾಗಬಹುದು' ಎಂದವರು ತಿಳಿಸಿದರು.

ADVERTISEMENT

ಎಲ್ಲೆಲ್ಲಿ ಎಷ್ಟು ಮಳೆ?: ಉತ್ತರ ಕನ್ನಡ ಜಿಲ್ಲೆಯ ಕದ್ರಾ 17 ಸೆಂ.ಮೀ ಗರಿಷ್ಠ ಮಳೆಯಾಗಿದೆ. ಹೊಸನಗರ 15, ಕೊಲ್ಲೂರು, ಗೋಕರ್ಣ 10, ಭಟ್ಕಳ, ಹೊನ್ನಾವರ 8, ಕಾರ್ಕಳ 7, ಕೋಲಾರ 6, ಸುಬ್ರಹ್ಮಣ್ಯ , ಕಾರವಾರ, ತೀರ್ಥಹಳ್ಳಿ, ಗುಡಿಬಂಡೆ 5, ಮಂಗಳೂರು, ಮೂಡುಬಿದರೆ, ಕುಂದಾಪುರ, ಮಾಲೂರು, ಚನ್ನಪಟ್ಟಣ 4, ಸುಳ್ಯ, ಉಡುಪಿ, ಜಮಖಂಡಿ, ಭಾಗಮಂಡಲ, ಸೊರಬ, ಮೂಡಿಗೆರೆ, ಮದ್ದೂರು, ಬಂಗಾರಪೇಟೆ, ಹೊಸಕೋಟೆ, ದೇವನಹಳ್ಳಿ, ನೆಲಮಂಗಲ, ಕನಕಪುರ 3, ಹುಕ್ಕೇರಿ, ಅಥಣಿ, ಹಾವೇರಿ, ವಿಜಯಪುರ, ರಾಯಚೂರು, ಸಾಗರ, ಶೃಂಗೇರಿ, ಕೊಪ್ಪ, ಚನ್ನರಾಯಪಟ್ಟಣ, ಮಂಡ್ಯ, ಪಾಂಡವಪುರ, ಚಿಂತಾಮಣಿ, ಚಿಕ್ಕಬಳ್ಳಾಪುರ, ಗೌರಿಬಿದನೂರು ಹಾಗೂ ಕುಣಿಗಲ್‍ನಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.