ADVERTISEMENT

ರಾಜ್ಯದ 15 ಜಿಲ್ಲೆಗಳಲ್ಲಿ 'ಯೆಲ್ಲೊ ಅಲರ್ಟ್'

​ಪ್ರಜಾವಾಣಿ ವಾರ್ತೆ
Published 29 ಜೂನ್ 2020, 19:30 IST
Last Updated 29 ಜೂನ್ 2020, 19:30 IST
ಮಳೆ ಸುರಿಯುತ್ತಿರುವ ದೃಶ್ಯ (ಸಾಂದರ್ಭಿಕ ಚಿತ್ರ)
ಮಳೆ ಸುರಿಯುತ್ತಿರುವ ದೃಶ್ಯ (ಸಾಂದರ್ಭಿಕ ಚಿತ್ರ)   
""

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಜೂ.30 ಮತ್ತು ಜು.1ರಂದು ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ಎರಡೂ ದಿನಗಳವರೆಗೆ 'ಯೆಲ್ಲೊ ಅಲರ್ಟ್' ಘೋಷಿಸಲಾಗಿದೆ.

ಕರಾವಳಿ ಭಾಗದಲ್ಲಿ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಮೀನುಗಾರರು ಕಡಲಿಗೆ ಇಳಿಯದಂತೆ ಇಲಾಖೆ ಎಚ್ಚರಿಸಿದೆ. ಉತ್ತರ ಒಳನಾಡಿನಲ್ಲಿ ಮುಂದಿನ 48 ಗಂಟೆಯವರೆಗೆ ಮಳೆ ಪ್ರಮಾಣ ಕಡಿಮೆ ಇರಲಿದೆ.

ADVERTISEMENT

ಎಲ್ಲೆಲ್ಲಿ ಎಷ್ಟು ಮಳೆ?: ಮಂಗಳೂರಿನಲ್ಲಿ ಸೋಮವಾರ 6 ಸೆಂ.ಮೀ ಗರಿಷ್ಠ ಮಳೆಯಾಗಿದೆ. ಕುಂದಾಪುರ, ಸುಬ್ರಹ್ಮಣ್ಯ, ಮಡಿಕೇರಿ, ಮೈಸೂರು 5, ಕೋಟ, ಭಾಗಮಂಡಲ, ಮೊಳಕಾಲ್ಮುರು 4, ಪುತ್ತೂರು, ಚಿಕ್ಕಮಗಳೂರು, ಶಿಡ್ಲಘಟ್ಟ 3, ಮುದ್ಗಲ್, ರಾಯಚೂರು, ತಿಪಟೂರು, ಶೃಂಗೇರಿ, ಹಾಸನ 2, ಹೊನ್ನಾವರ, ಕಾರವಾರ, ಹಾವೇರಿ, ಟಿ.ನರಸೀಪುರದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.