ಮೈಸೂರು: ಇಲ್ಲಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಸೋಮವಾರ ಬೆಳಿಗ್ಗೆ ಮಂಜು ಕವಿದಿದ್ದರಿಂದ, ನಟ ರಜನಿಕಾಂತ್ ಪ್ರಯಾಣಿಸುತ್ತಿದ್ದ ವಿಮಾನವು ಒಂದೂವರೆ ಗಂಟೆ ತಡವಾಗಿ ಆಗಮಿಸಿತು.
ಚೆನ್ನೈನಿಂದ ಈ ವಿಮಾನವು ಬೆಳಿಗ್ಗೆ 8.10ಕ್ಕೆ ಮೈಸೂರಿಗೆ ಬರಬೇಕಿತ್ತು. ಆದರೆ, 9.30ರ ಸುಮಾರಿಗೆ ಬಂದಿಳಿಯಿತು. ವಿಮಾನದಲ್ಲಿ 42 ಮಂದಿ ಪ್ರಯಾಣಿಕರು ಇದ್ದರು ಎಂದು ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು ಹೇಳಿದರು. ರಜನಿಕಾಂತ್ ಅವರು ಬಂಡೀಪುರಕ್ಕೆ ತೆರಳಿದ್ದು, ಜ. 29ರವರೆಗೆ ಅಲ್ಲಿದ್ದು, ವಿಶ್ರಾಂತಿ ಪಡೆಯ ಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.