ADVERTISEMENT

ಗೆಳೆಯನ ಸಾವು; ಕಂಬನಿ ಮಿಡಿದ ರಜನಿಕಾಂತ್‌

​ಪ್ರಜಾವಾಣಿ ವಾರ್ತೆ
Published 24 ನವೆಂಬರ್ 2018, 19:26 IST
Last Updated 24 ನವೆಂಬರ್ 2018, 19:26 IST
   

ಬೆಂಗಳೂರು: ನಟ ಅಂಬರೀಷ್‌ ನಿಧನಕ್ಕೆ ಚಿತ್ರರಂಗ ಹಾಗೂ ರಾಜಕೀಯ ಕ್ಷೇತ್ರದ ಗಣ್ಯರು ಸಂತಾಪ ಸೂಚಿಸಿದ್ದಾರೆ. ಸೂಪ‍ರ್‌ಸ್ಟಾರ್‌ ರಜನಿಕಾಂತ್‌ ತನ್ನ ಗೆಳೆಯನ ಸಾವಿಗೆ ಕಂಬನಿ ಮಿಡಿದಿದ್ದಾರೆ.

‘ಅದ್ಭುತ ವ್ಯಕ್ತಿ, ಆಪ್ತ ಸ್ನೇಹಿತ...ಈ ದಿನ ನಿನ್ನನ್ನು ನಾನು ಕಳೆದುಕೊಂಡೆ...’ ಎಂದು ನಟ ರಜನಿಕಾಂತ್‌ ಟ್ವೀಟ್‌ ಮಾಡಿದ್ದಾರೆ.

ಸ್ವೀಡನ್‌ನಲ್ಲಿ ಚಿತ್ರೀಕರಣದಲ್ಲಿರುವ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌, ಸುದ್ದಿ ತಿಳಿದ ಕೂಡಲೇ ಚಿತ್ರೀಕರಣ ಸ್ಥಗಿತಗೊಳಿಸಿದ್ದಾರೆ. ಶೀಘ್ರವೇ ಬೆಂಗಳೂರಿಗೆ ವಾಪಸಾಗುತ್ತಿರುವುದಾಗಿ ದರ್ಶನ್‌ ಟ್ವೀಟ್‌ ಮಾಡಿದ್ದಾರೆ.

ADVERTISEMENT

ಇನ್ನಷ್ಟು ಓದು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.