ADVERTISEMENT

ಇದೇ 9ರಂದು ರಾಜನಾಥ ಸಿಂಗ್ ಮಂಗಳೂರಿಗೆ

​ಪ್ರಜಾವಾಣಿ ವಾರ್ತೆ
Published 6 ಮಾರ್ಚ್ 2019, 19:15 IST
Last Updated 6 ಮಾರ್ಚ್ 2019, 19:15 IST

ಮಂಗಳೂರು: ಉಡುಪಿ–ಚಿಕ್ಕಮಗಳೂರು, ಮಂಗಳೂರು ಹಾಗೂ ಶಿವಮೊಗ್ಗ ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯ ಕ್ಲಸ್ಟರ್‌ ಮಟ್ಟದ ಬಿಜೆಪಿ ಕಾರ್ಯಕರ್ತರ ಸಮಾವೇಶ ಇದೇ 9 ರಂದು ನಗರದ ನೆಹರೂ ಮೈದಾನದಲ್ಲಿ ನಡೆಯಲಿದ್ದು, ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್‌ ಭಾಗವಹಿಸಲಿದ್ದಾರೆ.

ಅಂದು ಬೆಳಿಗ್ಗೆ 11ರಿಂದ ಮಧ್ಯಾಹ್ನ 1.30 ರವರೆಗೆ ಸಮಾವೇಶ ನಡೆಯಲಿದ್ದು, ಮಧ್ಯಾಹ್ನ 3.30ಕ್ಕೆ ನಗರದ ಟಿಎಂಎ ಪೈ ಸಭಾಂಗಣದಲ್ಲಿ ಸಿಂಗ್‌ ಅವರು, ಉದ್ಯಮಿಗಳು, ವೈದ್ಯರು, ಬುದ್ಧಿಜೀವಿಗಳ ಜತೆಗೆ ಸಂವಾದ ನಡೆಸಲಿದ್ದಾರೆ. ಲೋಕಸಭೆ ಚುನಾವಣಾ ಸಿದ್ಧತೆ ಕುರಿತಂತೆ ಸಮಾವೇಶದಲ್ಲಿ ಮಾಹಿತಿ ನೀಡಲಾಗುವುದು ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಮೋನಪ್ಪ ಭಂಡಾರಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT