ADVERTISEMENT

ರಾಜ್ಯಸಭೆ: ನಿರ್ಮಲಾ ಸೀತಾರಾಮನ್‌ ಸೇರಿದಂತೆ ಕರ್ನಾಟಕದ ನಾಲ್ವರಿಂದ ಪ್ರಮಾಣವಚನ

​ಪ್ರಜಾವಾಣಿ ವಾರ್ತೆ
Published 8 ಜುಲೈ 2022, 19:06 IST
Last Updated 8 ಜುಲೈ 2022, 19:06 IST

ನವದೆಹಲಿ: ಕರ್ನಾಟಕದಿಂದ ಆಯ್ಕೆಯಾದ ನಾಲ್ವರು ಸೇರಿದಂತೆ ಒಟ್ಟು 27 ಮಂದಿ ರಾಜ್ಯಸಭಾ ಸದಸ್ಯರಾಗಿ ಶುಕ್ರವಾರ ಪ್ರಮಾಣವಚನ ಸ್ವೀಕರಿಸಿದರು.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಹಾಗೂ ಕಾಂಗ್ರೆಸ್ ಸದಸ್ಯ ಜೈರಾಮ್‌ ರಮೇಶ್‌ ಇಂಗ್ಲಿಷ್‌ನಲ್ಲಿ, ಬಿಜೆಪಿಯ ಲಹರ್‌ ಸಿಂಗ್ ಸಿರೊಯಾ ಹಾಗೂ ಜಗ್ಗೇಶ್‌ ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ರಾಜ್ಯಸಭಾ ಸಭಾಪತಿ ಎಂ. ವೆಂಕಯ್ಯ ನಾಯ್ಡು ಅವರ ಸಮ್ಮುಖದಲ್ಲಿ ನೂತನ ಸದಸ್ಯರು ಪ್ರಮಾಣ ವಚನ ಸ್ವೀಕರಿಸಿದರು. ಕೆಲವು ದಿನಗಳ ಹಿಂದೆ ನಾಲ್ವರು ಸದಸ್ಯರು ಪ್ರಮಾಣವಚನ ಸ್ವೀಕರಿಸಿದ್ದರು. 57 ನೂತನ ಸದಸ್ಯರ ಪೈಕಿ 31 ಸದಸ್ಯರು ಪ್ರಮಾಣವಚನ ಸ್ವೀಕರಿಸಿದಂತೆ ಆಗಿದೆ.

ADVERTISEMENT

‘ಕೋವಿಡ್‌ ಮಾನದಂಡಗಳನ್ನು ಅನುಸರಿಸಿ ಸಂಸತ್‌ನ ಮುಂಗಾರು ಅಧಿವೇಶನ ನಡೆಯಲಿದೆ’ ಎಂದು ವೆಂಕಯ್ಯ ನಾಯ್ಡು ಹೇಳಿದರು.

ಪ್ರಮಾಣವಚನ ಸ್ವೀಕರಿಸದ ಸದಸ್ಯರು ಸಹ ಜುಲೈ 18ರಂದು ನಡೆಯುವ ರಾಷ್ಟ್ರಪತಿ ಚುನಾವಣೆಯಲ್ಲಿ ಮತ ಚಲಾಯಿಸಬಹುದು ಎಂದು ಅವರು ಸ್ಪಷ್ಟಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.