ADVERTISEMENT

ವಾರಾಂತ್ಯದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಪಟ್ಟಿ

​ಪ್ರಜಾವಾಣಿ ವಾರ್ತೆ
Published 12 ನವೆಂಬರ್ 2018, 18:08 IST
Last Updated 12 ನವೆಂಬರ್ 2018, 18:08 IST

ಬೆಂಗಳೂರು: ರಾಜ್ಯ ಸರ್ಕಾರ ನೀಡುವ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ ಗಣ್ಯರ ಪಟ್ಟಿ ಇದೇ 15 ರ ಬಳಿಕ ಬಿಡುಗಡೆ ಆಗುವ ಸಾಧ್ಯತೆ ಇದೆ.

ಉಪಚುನಾವಣೆ ಕಾರಣ ಪ್ರಶಸ್ತಿ ಆಯ್ಕೆ ಪಟ್ಟಿ ಪ್ರಕಟಿಸಿರಲಿಲ್ಲ. ಇದೇ 14 ರಂದು ಮುಖ್ಯಮಂತ್ರಿ ಎಚ್‌.ಡಿ.‌ಕುಮಾರಸ್ವಾಮಿ ಬೀದರ್‌ಗೆ ಭೇಟಿ ನೀಡಲಿದ್ದು, ಅಲ್ಲಿಂದ ವಾಪಸ್‌ ಬಂದ ನಂತರ ಪಟ್ಟಿ ಬಿಡುಗಡೆ ಆಗಲಿದೆ ಎಂದು ಮೂಲಗಳು ತಿಳಿಸಿವೆ.

ಪಟ್ಟಿ ಬಿಡುಗಡೆ ಆಗದೇ ಇರುವ ಬಗ್ಗೆ ಪ್ರಶಸ್ತಿಆಕಾಂಕ್ಷಿಗಳು ತೀವ್ರ ಅತೃಪ್ತಿ ವ್ಯಕ್ತಪಡಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.