ADVERTISEMENT

ರಾಮಮಂದಿರಕ್ಕೆ ಭೂಮಿಪೂಜೆ ರಾಜ್ಯದಲ್ಲಿ ಕಟ್ಟೆಚ್ಚರ: ಸೂಚನೆ

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2020, 23:55 IST
Last Updated 2 ಆಗಸ್ಟ್ 2020, 23:55 IST
ರಾಮ ಮಂದಿರ ವಿನ್ಯಾಸ ಮಾದರಿ
ರಾಮ ಮಂದಿರ ವಿನ್ಯಾಸ ಮಾದರಿ   

ಬೆಂಗಳೂರು: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಆಗಸ್ಟ್ 5ರಂದು ಭೂಮಿ ಪೂಜೆ ನೆರವೇರಲಿದ್ದು, ಈ ವೇಳೆಯಲ್ಲಿ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಟ್ಟೆಚ್ಚರ ವಹಿಸುವಂತೆ ಪೊಲೀಸರಿಗೆ ಸೂಚಿಸಲಾಗಿದೆ.

ಈ ಬಗ್ಗೆ ರಾಜ್ಯದ ಎಲ್ಲ ಕಮಿಷನರ್‌ಗಳು ಹಾಗೂ ಜಿಲ್ಲಾ ಎಸ್ಪಿಗಳಿಗೆ ಸೂಚನೆ ನೀಡಿರುವ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಮರ್‌ಕುಮಾರ್ ಪಾಂಡೆ, ‘ಭೂಮಿ ಪೂಜೆ ಅಂಗವಾಗಿ ರಾಜ್ಯದ ಹಲವು ದೇವಸ್ಥಾನಗಳಲ್ಲಿ ಪೂಜೆ ನಡೆಸಲು ಸಂಘಟನೆಗಳು ಸಿದ್ಧತೆ ಮಾಡಿಕೊಂಡಿವೆ. ಈ ವೇಳೆ ಅಹಿತಕರ ಘಟನೆಗಳು ನಡೆಯದಂತೆ ‍ಪೊಲೀಸರು ನೋಡಿಕೊಳ್ಳಬೇಕು’ ಎಂದಿದ್ದಾರೆ.

‘ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆ ಕೈಗೊಳ್ಳಬೇಕು. ಭೂಮಿ ಪೂಜೆ ನಡೆಯುವ ದಿನ ಕೆಲವು ಮತೀಯ ಸಂಘಟನೆಗಳು ಗಲಭೆ ಸೃಷ್ಟಿಸುವ ಸಾಧ್ಯತೆ ಇದೆ. ಅಂಥವರ ಮೇಲೆ ನಿಗಾವಹಿಸಬೇಕು’ ಎಂದೂ ತಿಳಿಸಿದ್ದಾರೆ.

ADVERTISEMENT

ಭದ್ರತೆ ಬಗ್ಗೆ ಚರ್ಚಿಸಲು ಸೋಮವಾರ ಅಧಿಕಾರಿಗಳ ಸಭೆ ಕರೆಯಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.