ADVERTISEMENT

ಕಾಂಗ್ರೆಸ್‌ ಮುಖಂಡರಿಂದ ರಾಮಲಿಂಗಾರೆಡ್ಡಿ ಮನವೊಲಿಕೆ ಯತ್ನ

​ಪ್ರಜಾವಾಣಿ ವಾರ್ತೆ
Published 14 ಜುಲೈ 2019, 7:21 IST
Last Updated 14 ಜುಲೈ 2019, 7:21 IST
   

ಬೆಂಗಳೂರು: ಕಾಂಗ್ರೆಸ್‌ ಹಿರಿಯ ನಾಯಕ ಹಾಗೂ ಮಾಜಿ ಸಚಿವ ರಾಮಲಿಂಗಾರೆಡ್ಡಿ ಅವರ ಮನವೊಲಿಕೆಗೆ ಕಾಂಗ್ರೆಸ್‌ ಮುಖಂಡರು ಹರಸಾಹಸ ಪಡುತ್ತಿದ್ದಾರೆ ಎನ್ನಲಾಗಿದೆ.

ಈಗಾಗಲೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ರಾಮಲಿಂಗಾರೆಡ್ಡಿ ತಟಸ್ಥ ನಿಲುವು ತಳೆದಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡರು ಅವರ ಮನವೊಲಿಕೆಗೆ ಮುಂದಾಗಿದ್ದಾರೆ.

ಕಾಂಗ್ರೆಸ್‌ ಹಿರಿಯ ನಾಯಕರಾದ ಎಚ್‌.ಕೆ.ಪಾಟೀಲ್ ಹಾಗೂ ಈಶ್ವರ ಖಂಡ್ರೆ ಅವರ ರಾಮಲಿಂಗಾ ರೆಡ್ಡಿ ಅವರ ನಿವಾಸಕ್ಕೆ ತೆರಳಿ ಮನವೊಲಿಕೆಯ ಕಸರತ್ತು ನಡೆಸುತ್ತಿದ್ದಾರೆ.

ADVERTISEMENT

ಒಂದು ವೇಳೆ ರಾಮಲಿಂಗಾರೆಡ್ಡಿ ಮನಸ್ಸು ಬದಲಿಸಿ ರಾಜೀನಾಮೆ ವಾಪಾಸು ಪಡೆದರೆ, ಬೆಂಗಳೂರಿನ ಮೂವರು ಶಾಸಕರಾದ ಎಸ್‌.ಟಿ.ಸೋಮಶೇಖರ್, ಬೈರತಿ ಬಸವರಾಜ್ ಹಾಗೂ ಮುನಿರತ್ನ ನಾಯ್ಡು ಬೆಂಗಳೂರಿಗೆ ವಾಪಾಸು ಬರುವ ಸಾಧ್ಯತೆಗಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.