ADVERTISEMENT

ರಾಜ್ಯಸಭೆಗೆ ರಾಮಮೂರ್ತಿ ಮರು ಆಯ್ಕೆ

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2019, 12:46 IST
Last Updated 5 ಡಿಸೆಂಬರ್ 2019, 12:46 IST
ಕೆ.ಸಿ. ರಾಮಮೂರ್ತಿ
ಕೆ.ಸಿ. ರಾಮಮೂರ್ತಿ   

ಬೆಂಗಳೂರು: ರಾಜ್ಯಸಭೆಯ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಸಿ.ರಾಮಮೂರ್ತಿ ಗುರುವಾರ ಅವಿರೋಧವಾಗಿ ಆಯ್ಕೆ ಆಗಿದ್ದಾರೆ.

ಇತರ ಇಬ್ಬರು ಅಭ್ಯರ್ಥಿಗಳು ಸಲ್ಲಿಸಿದ್ದ ನಾಮಪತ್ರಗಳು ಸೂಚಕರಿಲ್ಲದೆ ತಿರಸ್ಕೃತಗೊಂಡಿದ್ದವು. ನಾಮಪತ್ರ ವಾಪಸ್‌ಗೆ ಗುರುವಾರ ಕೊನೆಯ ದಿನವಾಗಿತ್ತು. ರಾಮಮೂರ್ತಿ ಅವರೊಬ್ಬರೇ ಕಣದಲ್ಲಿ ಉಳಿದಿದ್ದರಿಂದ ಅವಿರೋಧವಾಗಿ ಆಯ್ಕೆ ಆಗಿದ್ದಾರೆ ಎಂದು ಚುನಾವಣೆ ಅಧಿಕಾರಿಯೂ ಆದ ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಪ್ರಕಟಿಸಿದರು.

ವಿಧಾನಸಭೆಯಲ್ಲಿ ಸಂಖ್ಯಾಬಲದ ಕೊರತೆಯಿಂದಾಗಿ ಕಾಂಗ್ರೆಸ್, ಜೆಡಿಎಸ್ ತನ್ನ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿರಲಿಲ್ಲ. ಹಾಗಾಗಿಅವಿರೋಧ ಆಯ್ಕೆಗೆ ದಾರಿ ಸುಗಮವಾಗಿತ್ತು.

ADVERTISEMENT

2016ರಲ್ಲಿ ಕಾಂಗ್ರೆಸ್‌ನಿಂದ ರಾಜ್ಯಸಭೆಗೆ ಆಯ್ಕೆ ಆಗಿದ್ದಕೆ.ಸಿ.ರಾಮಮೂರ್ತಿಈಚೆಗೆ ರಾಜೀನಾಮೆ ನೀಡಿದ್ದ ಹಿನ್ನೆಲೆಯಲ್ಲಿ ಉಪಚುನಾವಣೆ ಎದುರಾಗಿತ್ತು. ಪಕ್ಷಕ್ಕೂ ರಾಜೀನಾಮೆ ನೀಡಿ ಹೊರಬಂದಿದ್ದ ಅವರುನಂತರ ಬಿಜೆಪಿಗೆ ಸೇರಿದ್ದರು. ಬಿಜೆಪಿ ವರಿಷ್ಠರು ಮತ್ತೆ ಅವರನ್ನೇ ಕಣಕ್ಕಿಳಿದಿದ್ದರು. ಇವರ ಅಧಿಕಾರ ಅವಧಿ 2022 ಜೂನ್ 30ರವರೆಗೆ ಇರುತ್ತದೆ.

‘ರಾಜ್ಯದ ಅಭಿವೃದ್ಧಿಗೆ ಶ್ರಮಿಸುತ್ತೇನೆ. ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮಗಳಿಂದ ಪ್ರೇರಿತನಾಗಿ ಬಿಜೆಪಿ ಸೇರಿದೆ. ಈ ಮೊದಲು ಬಿಜೆಪಿ ಸ್ನೇಹಿತರ ಜತೆಗೆ ಒಡನಾಟ ಚೆನ್ನಾಗಿತ್ತು. ಇನ್ನು ಮುಂದೆ ಅವರ ಜತೆಯಲ್ಲಿ ಸೇರಿ ಅಭಿವೃದ್ಧಿ ಕೆಲಸ ಮಾಡುತ್ತೇನೆ’ ಎಂದರು.

‘ಪಕ್ಷ ಬಿಡುವಾಗ ಶಾಸಕ ಡಿ.ಕೆ.ಶಿವಕುಮಾರ್ ಅವರಿಗೆ ಹೇಳಬೇಕು ಎಂದೇನಿಲ್ಲ. ಈಗ ಅವರಿಗೆ ಎಲ್ಲವೂ ಗೊತ್ತಾಗಿರುತ್ತದೆ’ ಎಂದು ಕುಟುಕಿದರು.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರಾಮಮೂರ್ತಿ ಅವರನ್ನು ಅಭಿನಂದಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.