ADVERTISEMENT

ರಾಮನಗರ: ದುಷ್ಕರ್ಮಿಗಳಿಂದ ಬಾಳೆ ಬೆಳೆ ನಾಶ

​ಪ್ರಜಾವಾಣಿ ವಾರ್ತೆ
Published 6 ಜೂನ್ 2020, 5:28 IST
Last Updated 6 ಜೂನ್ 2020, 5:28 IST
ರಾಮನಗರದಲ್ಲಿ ದುಷ್ಕರ್ಮಿಗಳಿಂದ ಬಾಳೆ ಬೆಳೆ ನಾಶ
ರಾಮನಗರದಲ್ಲಿ ದುಷ್ಕರ್ಮಿಗಳಿಂದ ಬಾಳೆ ಬೆಳೆ ನಾಶ   

ರಾಮನಗರ: ದುಷ್ಕರ್ಮಿಗಳು ಸುಮಾರು 300 ಕ್ಕೂ ಅಧಿಕ ಬಾಳೆ ಗಿಡಗಳನ್ನು ಕತ್ತರಿಸಿ ನಾಶ ಪಡಿಸಿರುವ ಘಟನೆ ತಾಲ್ಲೂಕಿನ ಕೂಟಗಲ್ ಹೋಬಳಿಯ ತಿಮ್ಮಸಂದ್ರ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಪಟೇಲ್ ರಾಜಣ್ಣ ಅವರ‌ ತೋಟದಲ್ಲಿ ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದಾರೆ. ರಾಜಣ್ಣ 6 ಎಕರೆ ಅಡಿಕೆ‌ ತೋಟದ ನಡುವೆ ಬಾಳೆಯನ್ನು ಬೆಳೆದಿದ್ದರು. ಬಾಳೆ‌‌‌ ಗೊನೆಗಳು ಕಟಾವು ಮಾಡುವ ಹಂತಕ್ಕೆ‌ ಬಂದಿದ್ದವು. ಇಷ್ಟರಲ್ಲಿ ಈ ಘಟನೆ ನಡೆದಿದೆ‌.

ತೋಟದ ಒಂದು ಭಾಗದಲ್ಲಿ 300ಕ್ಕೂ ಅಧಿಕ‌ ಗಿಡಗಳನ್ನು ನಾಶ ಪಡಿಸಿ ಪರಾರಿಯಾಗಿದ್ದು, ಬೆಳಿಗ್ಗೆ ತೋಟಕ್ಕೆ‌ ಬಂದ ವೇಳೆ ಘಟನೆ ಬೆಳಕಿಗೆ ಬಂದಿತು ಎಂದು ರಾಜಣ್ಣ ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.