ದಾವಣಗೆರೆ: ಕಾಂಗ್ರೆಸ್ ಪಕ್ಷದ ನಿಷ್ಠಾವಂತ ನಾಯಕರಾದ ಶಾಸಕ ಶಾಮನೂರು ಶಿವಶಂಕರಪ್ಪ ಅವರಿಗೆ ಸಚಿವ ಸ್ಥಾನ ನೀಡಬೇಕಾಗಿತ್ತು ಎಂದು ರಂಭಾಪುರಿ ಪೀಠದ ಪ್ರಸನ್ನ ರೇಣುಕ ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯರು ಅಭಿಪ್ರಾಯಪಟ್ಟರು.
ಸುದ್ದಿಗಾರರೊಂದಿಗೆ ಸೋಮವಾರ ಮಾತನಾಡಿದ ಅವರು, ಈಗಲೂ ಕಾಲ ಮಿಂಚಿಲ್ಲ. ಪಕ್ಷದ ವರಿಷ್ಠರು ಈ ಬಗ್ಗೆ ಚಿಂತನೆ ನಡೆಸಬೇಕು. ಬಹುಸಂಖ್ಯಾತ ಲಿಂಗಾಯತ ಸಮಾಜಕ್ಕೆ ಇನ್ನಷ್ಟು ರಾಜಕೀಯ ಪ್ರಾತಿನಿಧ್ಯ ನೀಡುವ ಅಗತ್ಯವಿದೆ. ಸಮಾಜವನ್ನು ತುಳಿಯುವ ಪ್ರಯತ್ನವನ್ನು ಯಾವ ಸರ್ಕಾರವೂ ಮಾಡಬಾರದು ಎಂದು ಪ್ರತಿಪಾದಿಸಿದರು.
ವೀರಶೈವ ಲಿಂಗಾಯತ ಧರ್ಮದ ವಿಚಾರದಲ್ಲಿ ಶಾಮನೂರು ಸರಿಯಾದ ನಿಲುವು ತಳೆದಿದ್ದಾರೆ. ಇಡೀ ವೀರಶೈವ ಲಿಂಗಾಯತ ಸಮಾಜ ಅವರನ್ನು ಗೌರವಿಸುತ್ತದೆ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.