ADVERTISEMENT

ಕಾಮಾಲೆ ಕಣ್ಣಿಗೆ ಎಲ್ಲವೂ ಹಳದಿ: ಸಿದ್ದರಾಮಯ್ಯಗೆ ರಮೇಶ್‌ ತಿರುಗೇಟು

ಸಚಿವ ರಮೇಶ ಜಾರಕಿಹೊಳಿ ಪ್ರತಿಕ್ರಿಯೆ;

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2020, 12:26 IST
Last Updated 7 ಮಾರ್ಚ್ 2020, 12:26 IST
   

ಬೆಳಗಾವಿ: ‘ಕಾಮಾಲೆಯಾದವರಿಗೆ ಎಲ್ಲವೂ ಹಳದಿ ಕಾಣುತ್ತದೆ. ಅದಕ್ಕೆ ಏನೂ ಮಾಡಲಾಗದು’ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ, ದರಿದ್ರ ಸರ್ಕಾರವೆಂದು ಜರಿದ ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದರು.

ನಗರದಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಆರ್ಥಿಕ ಮುಗ್ಗಟ್ಟಿನ ಪರಿಸ್ಥಿತಿಯಲ್ಲೂ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಉತ್ತಮ ಬಜೆಟ್‌ ಮಂಡಿಸಿದ್ದಾರೆ. ಕೃಷ್ಣಾ ನೀರಾವರಿ ಯೋಜನೆಗಳಿಗೆ ₹ 7 ಸಾವಿರ ಕೋಟಿ ಕೇಳಿದ್ದೇವು. ₹ 10 ಸಾವಿರ ಕೋಟಿ ನೀಡಿದ್ದಾರೆ. ರೈತರು ಹಾಗೂ ಕಾರ್ಮಿಕರ ಅಭಿವೃದ್ಧಿಗಾಗಿ ಹೆಚ್ಚಿನ ಹಣವನ್ನೂ ನೀಡಿದ್ದಾರೆ. ರಾಜ್ಯದ ಅಭಿವೃದ್ಧಿ ಪರವಾದ ಬಜೆಟ್‌ ಮಂಡಿಸಿದ್ದಾರೆ’ ಎಂದು ಪ್ರಶಂಶಿಸಿದರು.

‘ಮಹದಾಯಿ ಪ್ರಕರಣ ನ್ಯಾಯಾಲಯದಲ್ಲಿ ಇದೆ. ಕಾನೂನು ತೊಡಕುಗಳಿವೆ. ಗೋವಾ ಮುಖ್ಯಮಂತ್ರಿ ದೆಹಲಿಯಲ್ಲಿ ಕುಳಿತಿದ್ದಾರೆ. ರಾಜ್ಯದ ಹಿತದೃಷ್ಟಿಯಿಂದ ಏನನ್ನೂ ಕೇಳಬೇಡಿ. ದಯವಿಟ್ಟು ಸಹಕರಿಸಿ’ ಎಂದು ಮಾಧ್ಯಮದವರಲ್ಲಿ ವಿನಂತಿ ಮಾಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.