ADVERTISEMENT

ಯುವತಿಯ ಪೋಷಕರು ಡಿಕೆಶಿ ಬಗ್ಗೆ ಹೇಳಿರುವುದನ್ನು ಗಂಭೀರವಾಗಿ ಪರಿಗಣಿಸಬೇಕು: ಜೋಶಿ

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2021, 14:29 IST
Last Updated 27 ಮಾರ್ಚ್ 2021, 14:29 IST
   

ಬೆಳಗಾವಿ: ‘ನಮ್ಮ ಮಗಳನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹಣ ಕೊಟ್ಟು ಗೋವಾಕ್ಕೆ ಕಳುಹಿಸಿದ್ದರು ಎಂದು ರಮೇಶ ಜಾರಕಿಹೊಳಿ ವಿರುದ್ಧದ ಸಿ.ಡಿ.ಯಲ್ಲಿ ಕಾಣಿಸಿಕೊಂಡ ಯುವತಿಯ ಪೋಷಕರು ಹೇಳಿಕೆ ನೀಡಿರುವುದನ್ನು ಎಸ್‌ಐಟಿಯವರು ಗಂಭೀರವಾಗಿ ಪರಿಗಣಿಸಬೇಕು’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಒತ್ತಾಯಿಸಿದರು.

ಇಲ್ಲಿ ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಪ್ರಕರಣ ಗೊಂದಲಕಾರಿಯಾಗಿದೆ. ತನಿಖಾ ಸಂಸ್ಥೆಯು ಕಾನೂನಾತ್ಮಕವಾಗಿ ತಾರ್ಕಿಕ ಅಂತ್ಯಕ್ಕೆ ಬೇಗನೆ ತೆಗೆದುಕೊಂಡು ಹೋಗಬೇಕು. ಯುವತಿಯ ಪೋಷಕರು ಮಾಡಿರುವ ಆರೋಪಗಳು ಗಂಭೀರ ಸ್ವರೂಪದ್ದಾಗಿವೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT