ADVERTISEMENT

ಹೇಳಿಕೆ‌ ದಾಖಲಿಸಲು ಅನುಮತಿ: ಸದ್ಯದಲ್ಲೇ‌ ನ್ಯಾಯಾಲಯಕ್ಕೆ ಯುವತಿ‌ ಹಾಜರು -ವಕೀಲ

​ಪ್ರಜಾವಾಣಿ ವಾರ್ತೆ
Published 30 ಮಾರ್ಚ್ 2021, 7:47 IST
Last Updated 30 ಮಾರ್ಚ್ 2021, 7:47 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: 'ಅತ್ಯಾಚಾರದ ಪ್ರಕರಣದ ‌ಸಂತ್ರಸ್ತೆಯಾದ ಯುವತಿಯನ್ನು ನ್ಯಾಯಾಲಯಕ್ಕೆ‌ ಹಾಜರುಪಡಿಸಿ ಹೇಳಿಕೆ ದಾಖಲಿಸಲು ಅನುಮತಿ‌ ಸಿಕ್ಕಿದೆ. ಇಂದು ಮಧ್ಯಾಹ್ನವೇ ಯುವತಿ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ' ಎಂದು ಯುವತಿ ಪರ ವಕೀಲ ಕೆ.ಎನ್. ಜಗದೀಶ್‌ಕುಮಾರ್ ತಿಳಿಸಿದರು.

ನ್ಯಾಯಾಲಯ ಕಲಾಪ‌ ಮುಗಿಸಿ ಹೊರಬಂದ ಅವರು, 'ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ನಮ್ಮ ಪರವಾಗಿ ಆದೇಶ ನೀಡಿದೆ. ಸಿಆರ್‌ಪಿಸಿ 164ರ ಅಡಿ ಹೇಳಿಕೆ ದಾಖಲಿಸಿಕೊಳ್ಳಲು ಅನುಮತಿ ಸಿಕ್ಕಂತಾಗಿದೆ' ಎಂದರು.

'ಅರ್ಜಿಯನ್ನು ನ್ಯಾಯಾಲಯ ಮಾನ್ಯ ಮಾಡಿದೆ. ಸದ್ಯದಲ್ಲೇ ಯುವತಿ ನ್ಯಾಯಾಲಯಕ್ಕೆ ಬಂದು ಹೇಳಿಕೆ‌ ನೀಡಲಿದ್ದಾರೆ' ಎಂದೂ ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.