ಬೆಂಗಳೂರು: ಸಿ.ಡಿ. ಪ್ರಕರಣದ ಸಂತ್ರಸ್ತೆ ಆಡುಗೋಡಿಯಲ್ಲಿರುವ ಸಿಸಿಬಿಯ ತಾಂತ್ರಿಕ ವಿಭಾಗದ ವಿಶೇಷ ವಿಚಾರಣಾ ಕೊಠಡಿಗೆ ಶುಕ್ರವಾರ ಬೆಳಿಗ್ಗೆ ಬಂದಿದ್ದು, ಅವರನ್ನು ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.
'ಕೆಲಸದ ಆಮಿಷವೊಡ್ಡಿದ್ದ ರಮೇಶ ಜಾರಕಿಹೊಳಿ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ' ಎಂದು ಆರೋಪಿಸಿ ಸಂತ್ರಸ್ತೆ ದೂರು ನೀಡಿದ್ದರು. ಅದರನ್ವಯ ತನಿಖೆ ಮುಂದುವರಿಸಿರುವ ಅಧಿಕಾರಿಗಳು, ಪೂರಕ ಮಾಹಿತಿ ಕಲೆಹಾಕುತ್ತಿದ್ದಾರೆ.
ಜ್ವರದ ಕಾರಣ ನೀಡಿ ಆರೋಪಿಯಾದ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ವಿಚಾರಣೆಗೆ ಈಗಾಗಲೇ ಗೈರಾಗಿದ್ದಾರೆ. ಆದರೆ, ಸಂತ್ರಸ್ತೆ ತಮ್ಮ ವಕೀಲರ ಮೂಲಕ ವಿಚಾರಣೆಗೆ ಹಾಜರಾಗಿ ತನಿಖಾಧಿಕಾರಿ ಪ್ರಶ್ನೆಗಳಿಗೆ ಉತ್ತರಿಸುತ್ತಿದ್ದಾರೆ.
ಇವನ್ನೂ ಓದಿ
*ಸಿ.ಡಿ. ಪ್ರಕರಣ: 'ಜ್ವರ'ವೆಂದು ವಿಚಾರಣೆಯಿಂದ ಜಾರಿಕೊಂಡ ರಮೇಶ ಜಾರಕಿಹೊಳಿ
*ಸಿ.ಡಿ. ಪ್ರಕರಣ: ರಮೇಶ ಜಾರಕಿಹೊಳಿ ಗೋಕಾಕ್ನಲ್ಲಿ ಇದ್ದಾರೆ -ವಕೀಲ ಶ್ಯಾಮಸುಂದರ್
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.